Sunday, February 23, 2025
Sunday, February 23, 2025

ಚೈಲ್ಡ್ ಲೈನ್-1098: ಭಿತ್ತಿಪತ್ರ ಬಿಡುಗಡೆ

ಚೈಲ್ಡ್ ಲೈನ್-1098: ಭಿತ್ತಿಪತ್ರ ಬಿಡುಗಡೆ

Date:

ಉಡುಪಿ: ಚೈಲ್ಡ್ ಲೈನ್-1098 ಉಡುಪಿಯ ವತಿಯಿಂದ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಮಕ್ಕಳ ಭಿಕ್ಷಾಟನೆ ನಿರ್ಮೂಲನೆಗೊಳಿಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಭಿತ್ತಿಪತ್ರಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರು, ಪೇಜಾವರ ಮಠಾಧೀಶರು ಮತ್ತು ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.

ಭಿಕ್ಷಾಟನೆ ಎನ್ನುವುದು ಸಮಾಜದ ಒಂದು ದೊಡ್ಡ ಪಿಡುಗು. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಮಕ್ಕಳ ಭಿಕ್ಷಾಟನೆಯನ್ನು ಹೋಗಲಾಡಿಸುವ ಸಲುವಾಗಿ ಉಡುಪಿ ಚೈಲ್ಡ್ ಲೈನ್-1098 ತೆಗೆದುಕೊಂಡ ನಿರ್ಣಯ ಅತ್ಯಂತ ಶ್ಲಾಘನೀಯ.

ಭಿಕ್ಷೆ ಬೇಡುವ ಮಕ್ಕಳಿಗೆ ಹಣವನ್ನು ನೀಡಿದರೆ ಅದು ಸದುಪಯೋಗವಾಗದೇ, ದುರುಪಯೋಗದ ಮೂಲವಾಗುತ್ತಿದೆ. ಆದ್ದರಿಂದ ಯಾರೂ ಕೂಡ ಭಿಕ್ಷೆ ಬೇಡುವ ಮಕ್ಕಳಿಗೆ ಹಣವನ್ನು ನೀಡದೆ, ಸಹಾಯ ಮಾಡುವ ಇಚ್ಛೆಯುಳ್ಳವರು ಆಹಾರ ಮತ್ತು ಬಟ್ಟೆ ನೀಡಬೇಕು ಅಥವಾ ಅಂತಹ ಮಕ್ಕಳಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು.

ಹೀಗೆ ಮಾಡಿದಲ್ಲಿ ಮಕ್ಕಳ ಭಿಕ್ಷಾಟನೆ ಅವಶ್ಯವಾಗಿ ನಿರ್ಮೂಲನೆಯಾಗುತ್ತದೆ. ಈ ದಿಸೆಯಲ್ಲಿ ಸಮಾಜದ ಎಲ್ಲರೂ ಕೈ ಜೋಡಿಸೋಣ, ಈ ಮೂಲಕ ಮಕ್ಕಳ ಭಿಕ್ಷಾಟನೆ ಹೋಗಲಾಡಿಸುವ ಪ್ರಕ್ರಿಯೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ನಂತರ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ ಹಾಗೂ ಕೆ.ಎಸ್. ಆರ್.ಟಿ.ಸಿ. ಬಸ್ ಸ್ಟ್ಯಾಂಡ್ ನಲ್ಲಿರುವ ಬಸ್ಸುಗಳ ಚಾಲಕರಿಗೆ, ಆಟೋ ಚಾಲಕರಿಗೆ ಮಾಹಿತಿಯನ್ನು ನೀಡಿ ಭಿತ್ತಿ ಪತ್ರವನ್ನು ಹಂಚಲಾಯಿತು. ಮಕ್ಕಳು ಭಿಕ್ಷಾಟನೆಯಲ್ಲಿ ನಿರತರಾಗಿರುವುದನ್ನು ಕಂಡಲ್ಲಿ ಚೈಲ್ಡ್ ಲೈನ್-1098 ಕರೆ ಮಾಡಿ ತಿಳಿಸುವಂತೆ ಕೋರಲಾಯಿತು.

ಚೈಲ್ಡ್ ಲೈನ್-1098 ಉಡುಪಿಯ ನಿರ್ದೇಶಕರಾದ ರಾಮಚಂದ್ರ ಉಪಾಧ್ಯಾಯ, ಸಹ ನಿರ್ದೇಶಕರಾದ ಗುರುರಾಜ್ ಭಟ್ ಮತ್ತು ಚೈಲ್ಡ್ ಲೈನ್-1098 ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!