Monday, February 24, 2025
Monday, February 24, 2025

ಭಾರತ್ ಬಂದ್ ಬೆಂಬಲಿಸಲು ಸಿಐಟಿಯು ಮನವಿ

ಭಾರತ್ ಬಂದ್ ಬೆಂಬಲಿಸಲು ಸಿಐಟಿಯು ಮನವಿ

Date:

ಉಡುಪಿ: ಇದೇ ತಿಂಗಳ 27 ರಂದು ದೇಶಾದ್ಯಂತ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಬಿಜೆಪಿ ಸರಕಾರ ಜಾರಿಗೆ ತಂದಿರುವ ಮೂರು ಕರಾಳ ಕ್ರಷಿ ಕಾಯ್ದೆಗಳು, ವಿದ್ಯುತ್ ಮಸೂದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳು ರೈತರಿಗೆ ಮಾರಕವಾಗಿರುವುದು ಮಾತ್ರವಲ್ಲದೆ ಜನಸಾಮಾನ್ಯರ ಆದಾಯಕ್ಕೂ ಕತ್ತರಿ ಬೀಳುತ್ತದೆ. ವಿದ್ಯುತ್ ಕಾಯಿದೆಗೆ ತಿದ್ದುಪಡಿ ತಂದು ಪ್ರಸರಣ ಮತ್ತು ವಿತರಣೆಯನ್ನು ಸಹ ಖಾಸಗಿ ತಿಮಿಂಗಲಗಳಿಗೆ ನೀಡಲಾಗುವುದು. ಈ ಹಿನ್ನಲೆಯಲ್ಲಿ ಹೊಸತಾಗಿ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು, “ಪ್ರಿ ಪೈಡ್ ಮೀಟರ್ ಅಳವಡಿಸಲಾಗುವುದು” ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಬಸ್ ದರ ಮೊದಲಾದ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ. ಒಂದೆಡೆ ಕೊರೋನಾದಿಂದ ವ್ಯಾಪಾರ ವಹಿವಾಟು, ಕೆಲಸದ ಭದ್ರತೆ ಕುಂಠಿತಗೊಂಡಿದೆ. ಇನ್ನೊಂದೆಡೆ ಆದಾಯಕ್ಕೆ ಕತ್ತರಿ. 44 ಕಾರ್ಮಿಕ ಕಾಯಿದೆಗಳಲ್ಲಿ 15 ಕಾಯಿದೆ ರದ್ದುಗೊಳಿಸಿ, 29 ಕಾಯಿದೆಗಳನ್ನು 4 ಸಂಹಿತೆಗಳನ್ನಾಗಿ ಮಾಡಿ ಕೊರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಇಂತಹ ಸಂದರ್ಭದಲ್ಲಿ ಹಲವು ಸಮಾನ ಮನಸ್ಕ ಜನಪರ ಸಂಘಟನೆಗಳೊಂದಿಗೆ ಕೂಡಿಕೊಂಡು 27 ರಂದು ಬ್ರಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಅಂದು ಉಡುಪಿ, ಕುಂದಾಪುರ, ಬೈಂದೂರು, ಕಾರ್ಕಳದಲ್ಲಿ ಪ್ರತಿಭಟನೆ ನಡೆಯಲಿದೆ.

ಉಡುಪಿಯಲ್ಲಿ ಜೋಡುಕಟ್ಟೆಯಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಿಐಟಿಯು ಅಧ್ಯಕ್ಷರಾದ ಕೆ.ಶಂಕರ್‌, ಅಧ್ಯಕ್ಷರು, ಉಪಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ, ಶಶಿಧರ ಗೊಲ್ಲ, ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್, ತಾಲೂಕು ಅಧ್ಯಕ್ಷ ರಾಮ ಕಾರ್ಕಡ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!