Home ಸುದ್ಧಿಗಳು ಪ್ರಾದೇಶಿಕ ನಂದಳಿಕೆ: ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ

ನಂದಳಿಕೆ: ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ

495
0

ಬೆಳ್ಮಣ್: ನೆಹರು ಯುವ ಕೇಂದ್ರ ಉಡುಪಿ ಮತ್ತು ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ (ರಿ.) ನೇತೃತ್ವದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ ನಡೆಯಿತು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ವಠಾರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ, ಶೌಚಾಲಯ ಸ್ವಚ್ವತೆ, ವಿದ್ಯುತ್ ಕಂಬಕ್ಕೆ ತಾಗುತ್ತಿದ್ದ ಗಿಡ ಗಂಟಿ ಬಳ್ಳಿಗಳನ್ನು ಕಡಿಯುವ ಮೂಲಕ ಸ್ವಚ್ಛತೆ, ತಿರುವು ರಸ್ತೆಯ ಬದಿಯಲ್ಲಿದ್ದ ಗಿಡ ಗಂಟಿಯನ್ನು ಕಡಿಯುವ ಮೂಲಕ ಸ್ವಚ್ಛತೆ, ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ಮೂಲಕ ಕೊಡುಗೆಯಾಗಿ ನೀಡಿದ ದಾರಿಸೂಚನಾ ಫಲಕಕ್ಕೆ ಮುತ್ತಿಕೊಂಡಿದ್ದ ಗಿಡ ಗಂಟಿಯನ್ನು ಕಡಿಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷ ಬೋಳ ಉದಯ ಅಂಚನ್, ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ಆನಂದ ಪೂಜಾರಿ, ಬಿರೋಟ್ಟು ದಿನೇಶ್ ಪೂಜಾರಿ, ಕಾಸ್ರಬೈಲು ಸುರೇಶ್ ಪೂಜಾರಿ, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ಕಾರ್ಯದರ್ಶಿ ಹರಿಪ್ರಸಾದ್ ಆಚಾರ್ಯ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.