Monday, February 24, 2025
Monday, February 24, 2025

ಗೋವಿಗಾಗಿ ಮೇವು ತಂಡದ ಕಾರ್ಯ ಶ್ಲಾಘನೀಯ: ಮಟ್ಟಾರು ರತ್ನಾಕರ ಹೆಗ್ಡೆ

ಗೋವಿಗಾಗಿ ಮೇವು ತಂಡದ ಕಾರ್ಯ ಶ್ಲಾಘನೀಯ: ಮಟ್ಟಾರು ರತ್ನಾಕರ ಹೆಗ್ಡೆ

Date:

ಬ್ರಹ್ಮಾವರ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಕಳೆದ ವರ್ಷ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಮಾರ್ಚ್‌ ತನಕ 300 ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿ ಅಭಿಯಾನ ಚಿಕ್ಕಮಗಳೂರು ಜಿಲ್ಲೆಗೂ ಹಬ್ಬಿ ಯಶಸ್ವಿಯಾಯಿತ್ತು.

ಈ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ನೀಲಾವರ ಗೋಶಾಲೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೋವಿಗೆ ಮೇವನ್ನು ನೀಡುವುದರ ಮೂಲಕ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗೋವಿಗಾಗಿ ಮೇವು ಅಭಿಯಾನದ ತಂಡ ಜಿಲ್ಲೆಯಲ್ಲೇ ಪಾದರಸದಂತೆ ಕೆಲಸ ಮಾಡಿ ಅನೇಕ ಸಂಘ ಸಂಸ್ಥೆಗಳಿಗೆ ಪ್ರೇರೇಪಿಸುತ್ತಿರುವುದು ತಂಡದ ಗೋಪ್ರೇಮಕ್ಕೆ ಹಿಡಿದ ಕನ್ನಡಿಯಾಗಿದೆ. ಅಭಿಯಾನ ರಾಜ್ಯವ್ಯಾಪಿ ಹರಡಲಿ ಎಂದರು.

ಪ್ರಾಸ್ಥಾವಿಕವಾಗಿ ಮಾತನಾಡಿದ ಗೋವಿಗಾಗಿ ಮೇವು ಅಭಿಯಾನದ ಸ್ಥಾಪಕ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ, ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡಿ ಅಭಿಯಾನದಲ್ಲಿ ಕೈ ಜೋಡಿಸಲು ಮನವಿ ಮಾಡಲಾಗುವುದು ಎಂದರು.

ಬಂಟರ ಸಂಘ ಬೆಂಗಳೂರು ಕೋಶಾಧಿಕಾರಿ ದೀಪಕ್ ಶೆಟ್ಟಿ ಬಾರಕೂರು ಮಾತನಾಡಿ, ಸಂಘಟಿತ ಯುವಕರ ಗೋಪ್ರೇಮ, ಗೋಸೇವೆ ಇತರ ಸಂಘಟನೆಗೆ ಮಾದರಿಯಾಗಲಿ ಎಂದರು.

ನೀಲಾವರ ಗೋಶಾಲೆಯ ನರಸಿಂಹ ಭಟ್, ಅರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ ಕುಲಾಲ್, ಕೆಂಜೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಜಯಶ್ರೀ ಶೆಟ್ಟಿ, ವಿಕಾಸ್ ಶೆಟ್ಟಿ ಉಡುಪಿ, ಗೋವಿಗಾಗಿ ಮೇವು ಕೋಟ ವಲಯಾದ್ಯಕ್ಷ ಪ್ರದೀಪ್ ಪೂಜಾರಿ, ಮಹಿಳಾ ಅಧ್ಯಕ್ಷೆ ವಿದ್ಯಾ ಸಾಲ್ಯಾನ್, ಜಿಲ್ಲಾ ಸಮಿತಿಯ ನಾಗೇಂದ್ರ ಪುತ್ರನ್, ರಾಘವೇಂದ್ರ ಪ್ರಭು, ಪ್ರದೀಪ್ ಪಡುಕೆರೆ, ಶಿವರಾಮ್ ಬಂಗೇರ ಕೋಟ, ಸ್ಪಂದನ ಯುವಕ ಮಂಡಲ ಆರೂರು, ಮಹಾಲಿಂಗೇಶ್ವರ ಭಜನಾ ಮಂಡಳಿ ಕೂರಾಡಿ, ಪಾಂಚಜನ್ಯ ಯುವಕ ಮಂಡಲ ಕೋಟ, ನೀತಾ ಪ್ರಭು ಗೆಳೆಯರ ಬಳಗ ಹಿರಿಯಡ್ಕ, ಗೋವಿಗಾಗಿ ಮೇವು ಕೋಟ – ಸಾಲಿಗ್ರಾಮ ವಲಯ ತಂಡ ಈ ಸಂಘಟನೆಗಳು ಭಾಗವಹಿಸಿದವು. ಶಿಕ್ಷಕ ಸಂತೋಷ್ ಶೆಟ್ಟಿ ಎಳ್ಳಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!