Sunday, February 23, 2025
Sunday, February 23, 2025

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

Date:

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ ಕೇಂದ್ರದ ಪ್ರಾರಂಭ ಹಂತದಲ್ಲಿ ಸಕ್ರಿಯವಾಗಿದ್ದ ಸುಮಾರು 50ಕ್ಕೂ ಮಿಕ್ಕಿ ಕೋವಿಡ್ ಪ್ರಕರಣಗಳು ಶೂನ್ಯದತ್ತ ಸಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಕಿದಿಯೂರು ಇವರ ಮನೆಗೆ ತೆರಳಿ ಆಹಾರ ಧಾನ್ಯಗಳ ಕಿಟ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ, ಮಾಜಿ ಗೌರವಾಧ್ಯಕ್ಷ ಜಗದೀಶ್ ಕೆದ್ಲಾಯ, ಅಂಬಲಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಎ.ಶಿವಕುಮಾರ್, ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ, ಮಾಜಿ ಗ್ರಾ.ಪಂ. ಸದಸ್ಯ ಜಗದೀಶ್ ಆಚಾರ್ಯ, ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ವಾಮನ್ ಪಾಲನ್, ಕೋವಿಡ್ ಹೆಲ್ಪ್ ಡೆಸ್ಕ್ ಕೇಂದ್ರದ ವಿವಿಧ ವಿಭಾಗ ಪ್ರಮುಖರಾದ ಪ್ರಶಾಂತ್ ಕೆ.ಎಸ್., ಭರತ್ ರಾಜ್ ಕೆ.ಎನ್., ಸತೀಶ್ ಭಂಡಾರಿ, ಶಿವರಾಮ್ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಸರಸ್ವತಿ ಕೆ. ಶ್ರೀಯಾನ್, ಗ್ರಾಯತ್ರಿ, ನಿಶಾ ಕಿದಿಯೂರು, ಶ್ರೀನಿವಾಸ್ ಕಪ್ಪೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!