Friday, September 20, 2024
Friday, September 20, 2024

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಸಹಾಯಧನ: ಮಾಹಿತಿ ಅಪ್‌ಲೋಡ್ ಮಾಡಲು ಸೂಚನೆ

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಸಹಾಯಧನ: ಮಾಹಿತಿ ಅಪ್‌ಲೋಡ್ ಮಾಡಲು ಸೂಚನೆ

Date:

ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ 3,000 ರೂ. ಗಳ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿಬಿಟಿ ಆಧಾರ್) ಮೂಲಕ ಪಾವತಿಸಲು ಇ-ಗವರ್ನೆನ್ಸ್ ಇಲಾಖೆಗೆ ಕಳುಹಿಸಲಾಗಿದ್ದು, ಸದರಿ ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಪಾವತಿಯಾಗಿರುತ್ತದೆ ಹಾಗೂ ಉಳಿದ ಶೇ.10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವುದಿಲ್ಲ ಹಾಗೂ ಬ್ಯಾಂಕ್‌ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್.ಪಿ.ಸಿ.ಎಲ್ ಗೆ ಮ್ಯಾಪಿಂಗ್ ಮಾಡದಿರುವ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ಸಹಾಯಧನ ಮೊತ್ತವು ಪಾವತಿಯಾಗಿರುವುದಿಲ್ಲ.

ಆದ್ದರಿಂದ ಇದುವರೆಗೂ ಕೋವಿಡ್-19, 2ನೇ ಅಲೆಯ ಒಂದು ಬಾರಿ ಸಹಾಯಧನ 3,000 ರೂ. ವನ್ನು ಮಂಡಳಿಯಿಂದ ಸ್ವೀಕರಿಸದೇ ಇರುವ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆ ಆಗಿರುವ ಬಗ್ಗೆ ಹಾಗೂ ಬ್ಯಾಂಕ್‌ನವರು ಸದರಿ ಬ್ಯಾಂಕ್ ಖಾತೆಯನ್ನು ಎನ್.ಪಿ.ಸಿ.ಎಲ್ ಗೆ ಮ್ಯಾಪಿಂಗ್ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅಗತ್ಯ ದಾಖಲಾತಿಯನ್ನು ನವೆಂಬರ್ 30 ರ ಒಳಗೆ ಕಾರ್ಮಿಕ ನಿರೀಕ್ಷಕರು, 1ನೇ ವೃತ್ತ, ಉಡುಪಿ, 2ನೇ ವೃತ್ತ, ಉಡುಪಿ, ಕಾರ್ಕಳ ವೃತ್ತ, ಕುಂದಾಪುರ ವೃತ್ತ ಇಲ್ಲಿಗೆ ಸಲ್ಲಿಸಿ, ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!