Monday, October 14, 2024
Monday, October 14, 2024

ಆರೋಗ್ಯಕ್ಕಾಗಿ ಸೈಕ್ಲಿಂಗ್- ಬೃಹತ್ ಜಾಥಾ

ಆರೋಗ್ಯಕ್ಕಾಗಿ ಸೈಕ್ಲಿಂಗ್- ಬೃಹತ್ ಜಾಥಾ

Date:

ಉಡುಪಿ: ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಅಮೋಘ ಹಿರಿಯಡಕ, ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಣಿಪಾಲ ಶಾಖೆ ಮತ್ತು ವಸಂತಿ ಎ ಪೈ ಪ್ರತಿಷ್ಟಾನ ಮಣಿಪಾಲ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯಕ್ಕಾಗಿ ಸೈಕ್ಲಿಂಗ್ ಬೃಹತ್ ಜಾಥಾ ಕಾರ್ಯಕ್ರಮ ಸಿಂಡಿಕೇಟ್ ಸರ್ಕಲ್ ಬಳಿ ನಡೆಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಜಾಥಾಗೆ ಚಾಲನೆ ನೀಡಿದರು.

ಮಣಿಪಾಲದಿಂದ ಮಲ್ಪೆ ಬೀಚ್ ವರೆಗೆ ನಡೆದ ಈ ಸೈಕ್ಲಿಂಗ್ ನಲ್ಲಿ ನೂರಾರು ಜನರು ಭಾಗವಹಿಸಿದ್ದು, ಫಿಟ್ ಇಂಡಿಯಾಗಾಗಿ ಆರೋಗ್ಯದ ಬಗ್ಗೆ ವಿವಿಧ ಭಿತ್ತಿಪತ್ರಗಳು ಗಮನ ಸೆಳೆದವು. ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಆರೋಗ್ಯದ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು.

ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ರಾಮಚಂದ್ರ ಕಾಮತ್, ಸಹ ಸಂಚಾಲಕ ಡಾ. ವಿದ್ಯಾಧರ ಶೆಟ್ಟಿ, ಗಣೇಶ್ ನಾಯಕ್, ಸೆಲ್ಕೋ ಸೋಲಾರ್ ಡಿಜಿಎಂ ಜಗದೀಶ್ ಪೈ, ಅಮೋಘ ಸಂಚಾಲಕಿ ಪೂರ್ಣಿಮಾ ಸುರೇಶ್, ಉದಯ ಕುಮಾರ್, ಸುನಾಗ್ ಆಸ್ಪತ್ರೆಯ ಡಾ. ನರೇಂದ್ರ ಕುಮಾರ್ ಹೆಚ್.ಎಸ್, ಡಾ. ವೀಣಾ ನರೇಂದ್ರ , ಡಾ. ರವೀಂದ್ರ , ಮಾಜಿ ತಾ.ಪಂ ಸದಸ್ಯ ಸತ್ಯಾನಂದ ನಾಯಕ್, ಅನಿಲ್ ಶೆಟ್ಟಿ, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರಿದ್ದರು.

ಪ್ರೋ. ಮೇ.ರಾಧಾಕೃಷ್ಣ ನಿರೂಪಿಸಿದರು. ಜಾಥಾ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆಗಳಲ್ಲಿ ನಡೆಸಲಾಗುವುದು ಎಂದು ಸಂಘಟಕರಾದ ಡಾ. ರಾಮಚಂದ್ರ ಕಾಮತ್ ತಿಳಿಸಿದರು. ಭಾಗವಹಿಸಿದವರಿಗೆ ಪ್ರಮಾಣ ಪತ್ರ ಮತ್ತು ಟೀ. ಶಟ್೯ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!