Monday, January 19, 2026
Monday, January 19, 2026

ಕೆಂಪು ಕಲ್ಲು ಹಾಗೂ ಮರಳು ಅಭಾವ ಸಮಸ್ಯೆ ಬಗೆಹರಿಸಿ- ದ.ಕ. ಬಿಜೆಪಿ ನಿಯೋಗದಿಂದ ಸಿಎಂ ಭೇಟಿ

ಕೆಂಪು ಕಲ್ಲು ಹಾಗೂ ಮರಳು ಅಭಾವ ಸಮಸ್ಯೆ ಬಗೆಹರಿಸಿ- ದ.ಕ. ಬಿಜೆಪಿ ನಿಯೋಗದಿಂದ ಸಿಎಂ ಭೇಟಿ

Date:

ಬೆಂಗಳೂರು, ಜು.30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.

ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ.

ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ರವರನ್ನು ಸಹ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!