Monday, February 24, 2025
Monday, February 24, 2025

ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಜಾಗೃತಿ

ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಜಾಗೃತಿ

Date:

ರೋಟರಿ ಕ್ಲಬ್ ಮಣಿಪಾಲದ ಮಹಾತ್ವಕಾಂಕ್ಷೆ ಜಾಗತಿಕ ಅನುದಾನ ಯೋಜನೆಯಾದ “ಸಮುದಾಯ ಮಧುಮೇಹ ತಡೆಗಟ್ಟುವಿಕೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (ಸಿಕೆಡಿ) ಜಾಗೃತಿ ಕಾರ್ಯಕ್ರಮವನ್ನು  ರೋಟರಿ ಜಿಲ್ಲಾ 3182 ನ ಗವರ್ನರ್ ರಾಜಾರಾಮ್ ಭಟ್ ಅವರು ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉದ್ಘಾಟಿಸಿದರು.

ಸಮುದಾಯ ಮಧುಮೇಹ ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಶಿಬಿರಗಳನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಭಾಗವಾಗಿ ಮೂರು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಯಿತು.

ಈ ಯೋಜನೆಯು ಸುಮಾರು 25 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಸರಳ ಉದ್ಘಾಟನಾ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ 3182 ನ ಚುನಾಯಿತ ಗವರ್ನರ್ ಡಾ. ಎಚ್ ಜಯಗೌರಿ, ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷರಾದ ಪ್ರಶಾಂತ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ, ರೋಟರಿ ಪೂರ್ವ ಜಿಲ್ಲಾ ಗವರ್ನರ್ ಡಾ. ಭರತೇಶ್ ಅಧಿರಾಜ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರ ಪಿಂಡ ವಿಭಾಗದ ಮುಖ್ಯಸ್ಥರಾದ ಡಾ. ಶಂಕರ್ ಪ್ರಸಾದ್ ಮತ್ತು ಪ್ರಾಧ್ಯಾಪಕರಾದ ಡಾ. ರವೀಂದ್ರ ಪ್ರಭು, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ಹಾಗೂ ವರ್ಚುವಲ್ ಮೂಲಕ ಅನೇಕ ರೋಟರಿ ಗಣ್ಯರು ಭಾಗವಹಿಸಿದ್ದರು.

ಜುಲೈ 6 ಮಂಗಳವಾರದಿಂದ ಜಾರಿಗೆ ಬರುವಂತೆ ಮೂತ್ರಪಿಂಡ ವಿಭಾಗದ ಹೊರರೋಗಿ ವಿಭಾಗ ಮತ್ತು ಡಯಾಲಿಸಿಸ್ ಸೌಲಭ್ಯವನ್ನು ಆರಂಭಿಸಲಾಗುವುದು. ಈ ವಿಭಾಗವು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಧ್ಯಾಹ್ನ 2.00ರಿಂದ ಸಂಜೆ 5.00ರ ವರಗೆ ಕಾರ್ಯನಿರ್ವಹಿಸಲಿದೆ. ಡಯಾಲಿಸಿಸ್ ಸೌಲಭ್ಯವು ಪ್ರತಿ ದಿನ ದೊರೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಕರೆ ಮಾಡಿ- 9731601149, 08258 230583. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!