Saturday, February 28, 2026
Saturday, February 28, 2026

ಮಣಿಪಾಲ: ಡಾ. ವಿ.ಎಸ್. ಆಚಾರ್ಯ ರಸ್ತೆ ನಾಮಫಲಕ ಅನಾವರಣ

ಮಣಿಪಾಲ: ಡಾ. ವಿ.ಎಸ್. ಆಚಾರ್ಯ ರಸ್ತೆ ನಾಮಫಲಕ ಅನಾವರಣ

Date:

ಡಾ. ವಿ.ಎಸ್. ಆಚಾರ್ಯರ ಜನ್ಮದಿನದ ಪ್ರಯುಕ್ತ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಗೆ ಡಾ. ವಿ. ಎಸ್. ಆಚಾರ್ಯ ರಸ್ತೆ ಎಂದು ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಘೋಷಣೆ ಮಾಡಿ ನಾಮಫಲಕ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, ಡಾ. ಆಚಾರ್ಯರ ಪಕ್ಷನಿಷ್ಠೆ, ಸಂಘಟಾನ ಚತುರತೆ ಮತ್ತು ಕರ್ತವ್ಯನಿಷ್ಠೆ ಸದಾ ಪ್ರೇರಣೆಯಾಗಿದೆ. ರಾಜಕೀಯದಲ್ಲಿ ಡಾ. ಆಚಾರ್ಯರಂತಹ ಮುತ್ಸದಿ ರಾಜಕಾರಣಿ ಬಹಳ ಅಪರೂಪ. ಅವರಲ್ಲಿದ್ದ ಗುಣಗಳನ್ನು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಕೂಡ ಇಷ್ಟಪಡುತ್ತಿದ್ದರು ಎಂದರು. ಜಿಲ್ಲಾಧಿಕಾರಿ ಕಚೇರಿ ಎದುರಿನ ಡಾ. ವಿ.ಎಸ್. ಆಚಾರ್ಯರವರ ಪುತ್ಥಳಿಗೆ ಸಚಿವ ಜಗದೀಶ್ ಶೆಟ್ಟರ್ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಶಾಸಕ ಕೆ. ರಘುಪತಿ ಭಟ್, ಜಿಲ್ಲಾಧಿಕಾರಿ ಜಿ. ಜಗದೀಶ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರಸಭೆ ಪೌರಾಯುಕ್ತ ಉದಯಕುಮಾರ್, ಡಾ. ಆಚಾರ್ಯರ ಪುತ್ರರಾದ ಡಾ. ರವಿರಾಜ ಆಚಾರ್ಯ, ಡಾ. ಕಿರಣ್ ಆಚಾರ್ಯ ಮೊದಲಾವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!