Friday, July 24, 2026
Friday, July 24, 2026

ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

ಇ-ಕೆವೈಸಿ ನೊಂದಣಿಗೆ ಅಂತಿಮ ಅವಕಾಶ

Date:

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್‌ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು.

ನವೆಂಬರ್ 30 ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!