Monday, September 23, 2024
Monday, September 23, 2024

ಪ್ರಥಮ್ ಕೈಯಲ್ಲಿ ಮೂಡಿಬಂದ ಅರಿಶಿನ ಗಣಪ

ಪ್ರಥಮ್ ಕೈಯಲ್ಲಿ ಮೂಡಿಬಂದ ಅರಿಶಿನ ಗಣಪ

Date:

ಕಟಪಾಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ10 ಲಕ್ಷ ಅರಿಶಿನ ಗಣಪತಿ ಅಭಿಯಾನ ಬಹಳ ಸದ್ದು ಮಾಡುತ್ತಿದ್ದು, ಕಟಪಾಡಿ ಪ್ರಥಮ್ ಕಾಮತ್ ಇವರು ರಚಿಸಿದ ಅರಶಿನ ಗಣಪ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಕಟಪಾಡಿಯ ಎಸ್.ವಿ.ಎಸ್. ಆಂಗ್ಲ ಮಾದ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಪ್ರಥಮ್ ಕಾಮತ್ ತಲಾ 250 ಗ್ರಾಂ ಅರಿಶಿನ ಹಾಗೂ ಮೈದಾ ಮಿಶ್ರಣದಿಂದ ಪರಿಸರ ಸ್ನೇಹಿ ಗಣಪನನ್ನು ರಚಿಸಿದ್ದಾರೆ.

ಇವರು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ತರಕಾರಿಗಳನ್ನು ಬಳಸಿ ತ್ರಿವರ್ಣ ಕಲಾಕೃತಿ ರಚಿಸಿದ್ದರು.

ಕೆ. ನಾಗೇಶ್ ಕಾಮತ್, ಕೆ. ಸುಜಾತ ಕಾಮತ್ ದಂಪತಿಯ ಪುತ್ರ ಪ್ರಥಮ್ ಕಾಮತ್ ಜಾದೂ ಪ್ರದರ್ಶನದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದಾರೆ. ಇದರ ಜೊತೆಗೆ ಅವರು ಚಿತ್ರಕಲೆ, ಕ್ರಾಫ್ಟ್, ಕ್ಲೇ ಮಾಡೆಲಿಂಗ್, ಛದ್ಮವೇಷಗಳಲ್ಲಿಯೂ ಎತ್ತಿದ ಕೈ. ಉದಯ ಟಿವಿಯ ’ಸದಾ ನಿಮ್ಮೊಂದಿಗೆ’ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಶ್ರೀನಗರ ಕಿಟ್ಟಿಯವರೊಂದಿಗೆ ಜಾದೂ ಪ್ರದರ್ಶನವನ್ನು ಪ್ರಥಮ್ ಕಾಮತ್ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!