Monday, February 24, 2025
Monday, February 24, 2025

ಪ್ರಥಮ್ ಕೈಯಲ್ಲಿ ಮೂಡಿಬಂದ ಅರಿಶಿನ ಗಣಪ

ಪ್ರಥಮ್ ಕೈಯಲ್ಲಿ ಮೂಡಿಬಂದ ಅರಿಶಿನ ಗಣಪ

Date:

ಕಟಪಾಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ10 ಲಕ್ಷ ಅರಿಶಿನ ಗಣಪತಿ ಅಭಿಯಾನ ಬಹಳ ಸದ್ದು ಮಾಡುತ್ತಿದ್ದು, ಕಟಪಾಡಿ ಪ್ರಥಮ್ ಕಾಮತ್ ಇವರು ರಚಿಸಿದ ಅರಶಿನ ಗಣಪ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಕಟಪಾಡಿಯ ಎಸ್.ವಿ.ಎಸ್. ಆಂಗ್ಲ ಮಾದ್ಯಮ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಪ್ರಥಮ್ ಕಾಮತ್ ತಲಾ 250 ಗ್ರಾಂ ಅರಿಶಿನ ಹಾಗೂ ಮೈದಾ ಮಿಶ್ರಣದಿಂದ ಪರಿಸರ ಸ್ನೇಹಿ ಗಣಪನನ್ನು ರಚಿಸಿದ್ದಾರೆ.

ಇವರು ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ತರಕಾರಿಗಳನ್ನು ಬಳಸಿ ತ್ರಿವರ್ಣ ಕಲಾಕೃತಿ ರಚಿಸಿದ್ದರು.

ಕೆ. ನಾಗೇಶ್ ಕಾಮತ್, ಕೆ. ಸುಜಾತ ಕಾಮತ್ ದಂಪತಿಯ ಪುತ್ರ ಪ್ರಥಮ್ ಕಾಮತ್ ಜಾದೂ ಪ್ರದರ್ಶನದಲ್ಲಿ ಪ್ರಖ್ಯಾತಿಯನ್ನು ಗಳಿಸಿದ್ದಾರೆ. ಇದರ ಜೊತೆಗೆ ಅವರು ಚಿತ್ರಕಲೆ, ಕ್ರಾಫ್ಟ್, ಕ್ಲೇ ಮಾಡೆಲಿಂಗ್, ಛದ್ಮವೇಷಗಳಲ್ಲಿಯೂ ಎತ್ತಿದ ಕೈ. ಉದಯ ಟಿವಿಯ ’ಸದಾ ನಿಮ್ಮೊಂದಿಗೆ’ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಶ್ರೀನಗರ ಕಿಟ್ಟಿಯವರೊಂದಿಗೆ ಜಾದೂ ಪ್ರದರ್ಶನವನ್ನು ಪ್ರಥಮ್ ಕಾಮತ್ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.24: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...
error: Content is protected !!