Monday, February 24, 2025
Monday, February 24, 2025

ತೆಂಕನಿಡಿಯೂರು ಕಾಲೇಜು: ಉದ್ಯಮಶೀಲತಾ ಅರಿವು ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜು: ಉದ್ಯಮಶೀಲತಾ ಅರಿವು ಕಾರ್ಯಕ್ರಮ

Date:

ಮಲ್ಪೆ: ಇಂದು ವಿದ್ಯಾರ್ಥಿಗಳು ಉದ್ಯಮಿಗಳಾಗಿ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಆದರೆ ಈ ಕ್ಷೇತ್ರದ ಬಗ್ಗೆ ಅರಿವಿನ ಕೊರತೆ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ತರಬೇತಿ ನೀಡುವುದು ಅತಿ ಅಗತ್ಯ ಎಂದು ಸಿಡಾಕ್‌ನ ಉಪನಿರ್ದೇಶಕರಾದ ಅರವಿಂದ ಡಿ. ಬೆಳ್ಳೆರಿ ಹೇಳಿದರು.

ಅವರು ಕರ್ನಾಟಕ ಉದ್ಯಮಶೀಲತಾ ಕೇಂದ್ರ ಮಂಗಳೂರು ವಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ಉದ್ಯೋಗ ಮಾಹಿತಿ ಘಟಕದ ಸಹಯೋಗದಲ್ಲಿ ನಡೆದ ಉದ್ಯಮಶೀಲತಾ ಅರಿವು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಮೃದು ಕೌಶಲ್ಯಗಳ ತರಬೇತುದಾರರಾದ ಡಾ. ಜಯಕಿಶನ್ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಯಮಶೀಲತೆಯಲ್ಲಿ ಕೌಶಲ್ಯಗಳ ಪಾತ್ರವನ್ನು ವಿವರಿಸಿದರು. ಸಿಡಕಾನ್‌ನ ತರಬೇತುದಾರರಾದ ಪ್ರಥ್ವಿರಾಜ್ ನಾಯಕ್ ಅವರು ಸರಕಾರದ ಸೌಲಭ್ಯ ಹಾಗೂ ಯೋಜನೆಗಳ ಬಗ್ಗೆ ವಿವರಿಸಿದರು.

ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಉಮೇಶ್ ಪೈ ಸ್ವಾಗತಿಸಿ, ಸಮಾಜಕಾರ್ಯ ವಿಭಾಗ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ. ವಂದಿಸಿದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರಾದ ಡಾ. ಹೆಚ್.ಕೆ. ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!