Sunday, September 22, 2024
Sunday, September 22, 2024

ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಅಗತ್ಯ ಸಿದ್ದತೆ: ಜಿಲ್ಲಾಧಿಕಾರಿ

ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಅಗತ್ಯ ಸಿದ್ದತೆ: ಜಿಲ್ಲಾಧಿಕಾರಿ

Date:

ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮೆಡಿಕಲ್ ಎಕ್ಸ್ಪರ್ಟ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳನ್ನು ಕೋವಿಡ್ 3 ನೇ ಅಲೆಯಿಂದ ರಕ್ಷಿಸುವ ಕುರಿತಂತೆ ಈಗಾಗಲೇ ಭಾರತೀಯ ಮಕ್ಕಳ ವೈದ್ಯರ ಸಂಘವು ಸಿದ್ದಪಡಿಸಿರುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಈಗಿನಿಂದಲೇ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಕ್ಕಳ ಚಿಕಿತ್ಸೆಗಾಗಿ ಕೆಎಂಸಿಯಲ್ಲಿ 40 ಐಸಿಯು ಬೆಡ್ ಗಳು ಮತ್ತು ಜಿಲ್ಲಾಸ್ಪತ್ರೆ ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಒಟ್ಟು 60 ಬೆಡ್ ಗಳನ್ನು ಸಿದ್ದಪಡಿಸುವಂತೆ ತಿಳಿಸಿದರು.

ಮಕ್ಕಳಿಗೆ ಕೋವಿಡ್ ಚಿಕಿತ್ಸೆ ನೀಡುವ ಕುರಿತಂತೆ ಜಿಲ್ಲೆಯ ಸರ್ಕಾರಿ ಮಕ್ಕಳ ವೈದ್ಯರೊಂದಿಗೆ, ಎಲ್ಲಾ ಖಾಸಗಿ ಆಸ್ಪತ್ರೆಗಳ ಮಕ್ಕಳ ತಜ್ಞರು ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ನೀಡಬೇಕಾದ ಚಿಕಿತ್ಸೆ ವಿಧಾನಗಳ ಕುರಿತು ಭಾರತೀಯ ಮಕ್ಕಳ ವೈದ್ಯರ ಸಂಘ ಸಿದ್ದಪಡಿಸಿರುವ ವಿಧಾನಗಳ ಬಗ್ಗೆ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗೆ ಮಣಿಪಾಲದ ಕೆ.ಎಂ.ಸಿಯಲ್ಲಿ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ವೈದ್ಯಕೀಯ ಉಪಕರಣಗಳ ಬಳಕೆ ಕುರಿತಂತೆ ತಾಂತ್ರಿಕ ತರಬೇತಿಯನ್ನೂ ಸಹ ನೀಡುವಂತೆ ಜಿ.ಜಗದೀಶ್ ತಿಳಿಸಿದರು.

ಪೋಷಕರು ಅನಗತ್ಯವಾಗಿ ತಮ್ಮ ಮಕ್ಕಳನ್ನು ಜನಸಂದಣಿ ಇರುವ ಪ್ರದೇಶಗಳಿಗೆ ಕರೆದೊಯ್ಯದೇ, ಮಕ್ಕಳಿಗೆ ಮನೆಯಲ್ಲಿಯೇ ಸಿದ್ದಪಡಿಸಿದ ಪೌಷ್ಠಿಕ ಆಹಾರ ನೀಡುವುದರ ಮೂಲಕ ರೋಗ-ನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು ಎಂದು ಸಭೆಯಲ್ಲಿದ್ದ ಮಕ್ಕಳ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಹಾಗೂ ಜಿಲ್ಲೆಯ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!