Saturday, September 28, 2024
Saturday, September 28, 2024

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ

Date:

ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಒಂದು ಕಾರ್ಯಕ್ರಮ. ಇಂತಹ ಜನಪರ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ತನ್ಮೂಲಕ ಬದುಕಿನಲ್ಲಿ ಆವರಿಸಿಕೊಂಡಿರುವ ಕತ್ತಲಿನಿಂದ ದೂರವಾಗಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ ಹೇಳಿದರು.

ಅವರು ಪಡುಬಿದ್ರಿಯಲ್ಲಿ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನವು ಪ್ರಸಾದ್ ನೇತ್ರಾಲಯ ಜೊತೆಗೂಡಿ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘಟಕರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಸಾರ್ವಜನಿಕರ ಸ್ಪಂದನೆ ಸರಿಯಾಗಿದ್ದಾಗ ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಬರುತ್ರದೆ ಎಂದು ಹೇಳಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯ ಸ್ತುತ್ಯರ್ಹ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮಾತನಾಡಿ, ಇಂದು ಮಾತಿಗಿಂತ ಕೃತಿಗೆ ಹೆಚ್ಚು ಒತ್ತು ಕೊಡಬೇಕಾಗಿದೆ. ಈ ಕಾರ್ಯಕ್ರಮದಿಂದ ಹೆಚ್ಚಿನ ಜನರು ಪ್ರಯೋಜನ ಪಡೆದು ತಮ್ಮ ಕಣ್ಣಿನಲ್ಲಿ ಬೆಳಕು ಮೂಡಿದರೆ ನಮ್ಮ ಶ್ರಮ ಸಾರ್ಥಕ ಎಂದರು.

ಪ್ರಸಾದ್ ನೇತ್ರಾಲಯದ ಡಾ. ಗುಣಶ್ರೀ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಸುಸ್ಲಾನ್ ಆರ್.& ಆರ್. ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮನಾಥ್ ಕೆ. ಆರ್. ಉಪಸ್ಥಿತರಿದ್ದರು.

ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಸ್ವಾಗತಿಸಿ , ಪ್ರಸ್ತಾವನೆಗೈದರು. ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಸೆ.27: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು...
error: Content is protected !!