Saturday, October 5, 2024
Saturday, October 5, 2024

ಕೋಡಿಕಲ್: ನೇತ್ರ ತಪಾಸಣಾ ಶಿಬಿರ

ಕೋಡಿಕಲ್: ನೇತ್ರ ತಪಾಸಣಾ ಶಿಬಿರ

Date:

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ನೇತೃತ್ವದಲ್ಲಿ ಬಿಜೆಪಿ ಬಂಗ್ರಕೂಳೂರು 16ನೇ ವಾರ್ಡ್ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಮತ್ತು ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ ಬೆಂಗಳೂರು, ಕಾರ್ಲ್ ಜೈಶ್ ಇಂಡಿಯಾ (ಬೆಂಗಳೂರು) ಪ್ರೈವೇಟ್ ಲಿಮಿಟೆಡ್ ಇವರೆಲ್ಲರ ಸಹಕಾರದೊಂದಿಗೆ ಇಂದು ನಡೆಯಿತು.

ಸಮಾರಂಭದ ಸಭಾಧ್ಯಕ್ಷತೆಯನ್ನು ಶಾಸಕ ಡಾ. ವೈ. ಭರತ್ ಶೆಟ್ಟಿಯವರು ವಹಿಸಿದರು. ಮಂಗಳೂರಿನ ಉಪ ಮೇಯರ್ ಸುಮಂಗಳಾ ರಾವ್, ಮ.ನ.ಪಾ ಸದಸ್ಯರಾದ ಮನೋಜ್ ಕುಮಾರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ವೈದ್ಯರಾದ ಡಾ. ಮೈತ್ರಿ ತುಂಗಾ, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಕೋವಿಡ್-19ನ ಸಂದರ್ಭದಲ್ಲಿ ಸೇವೆಗೈದ ಡಾ. ನಿತಿನ್ ಜೋಸೆಫ್, ಸ್ವಾತಿ, ಶಶಿಕಲಾ ರವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಉತ್ತರ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ವಿವೇಕ್ ದಂಬೆಲ್ ರವರು ಕಾರ್ಯಕ್ರಮ ನಿರೂಪಿಸಿದರು. ಶಕ್ತಿ ಕೇಂದ್ರ ಪ್ರಮುಖರು, ಎಲ್ಲಾ ಬೂತ್ ಅಧ್ಯಕ್ಷರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!