Tuesday, September 24, 2024
Tuesday, September 24, 2024

ಪರ್ಕಳ: ಕೊರೊನಾ ಸೇನಾನಿಗಳಿಗೆ ಗೌರವಾರ್ಪಣೆ

ಪರ್ಕಳ: ಕೊರೊನಾ ಸೇನಾನಿಗಳಿಗೆ ಗೌರವಾರ್ಪಣೆ

Date:

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಪರ್ಕಳ ಸಂಸ್ಥೆಯಿಂದ ಹೆರ್ಗ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಪರ್ಕಳದ ಪ್ರಧಾನ ಕಛೇರಿಯಲ್ಲಿ ಧನಸಹಾಯ ನೀಡಿ ಗೌರವಿಸಲಾಯಿತು. ಕೋವಿಡ್ 19ರ ಸಂದರ್ಭದಲ್ಲಿ ಜೀವದ ಹಂಗು ತೊರೆದು ಜನಸೇವೆ ಮಾಡಿದ 11 ಜನ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ಅಶೋಕ ಕಾಮತ್ ಕೆ ವಹಿಸಿದ್ದರು. ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರ ಆರ್. ನಾಯಕ್, ಮಾತನಾಡಿ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸ್ಮರಿಸಿ ಸಂಸ್ಥೆಯ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸೊಸೈಟಿಯ ನಿರ್ದೇಶಕರುಗಳಾದ ಬಿ. ರಾಮಕೃಷ್ಣ ನಾಯಕ್ ಪರ್ಕಳ, ನರಸಿಂಹ ನಾಯಕ್ ಮಣಿಪಾಲ, ಎನ್ ಸದಾನಂದ ನಾಯಕ್ ಹೆರ್ಗ, ಮಹೇಶ್ ನಾಯಕ್ ಹಿರಿಯಡ್ಕ, ರವೀಂದ್ರ ಪಾಟ್ಕರ್ ಬಂಟಕಲ್, ವಿಜೇತ್ ಕುಮಾರ್ ಬೆಳ್ಳರ್ಪಡಿ, ಗಣಪತಿ ನಾಯಕ್ ಕೆ. ಪರ್ಕಳ, ಗಣಪತಿ ಪ್ರಭು ಕುಕ್ಕೆಹಳ್ಳಿ, ಜಯಂತಿ ಪರ್ಕಳ, ರೂಪ ದೇವಿನಗರ, ಶ್ರೀ ನರಸಿಂಹ ದೇವಸ್ಥಾನ ನರಸಿಂಗೆ ಆಡಳಿತ ಮೊಕ್ತೇಸರ ರಮೇಶ್ ಸಾಲ್ವನ್ಕಾರ್ ಅಲೆವೂರು, ಆನಂದ ನಾಯಕ್ ಆರ್ಬಿ ಉಪಸ್ಥಿತರಿದ್ದರು.

ಸೊಸೈಟಿ ಉಪಾಧ್ಯಕ್ಷ ಪಾಂಡುರಂಗ ಕಾಮತ್ ಸ್ವಾಗತಿಸಿ ಪ್ರಸ್ತಾವನೆಗೈದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ನರಸಿಂಗೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಎಸ್.ಎಸ್. ಶಿಬಿರ

ಉಡುಪಿ, ಸೆ.23: ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ತಂಡ, ಕಸ್ತೂರ್ಬಾ ಮೆಡಿಕಲ್...

ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್: ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ, ಸೆ.23: ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್ (ಹೆಚ್.ಎ.ಎಲ್), ಬೆಂಗಳೂರು ಇವರ ವತಿಯಿಂದ...

ಸೆ. 26: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.23: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಸೆ.23: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ...
error: Content is protected !!