Sunday, February 23, 2025
Sunday, February 23, 2025

ಪಡುಕರೆ- ರಾಜ್ಯ ಪುರಸ್ಕಾರ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಪಡುಕರೆ- ರಾಜ್ಯ ಪುರಸ್ಕಾರ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Date:

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಹಾಗೂ 2021ರ ರಾಜ್ಯ ಪುರಸ್ಕಾರ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷರಾದ ಆನಂದ ಸಿ ಕುಂದರ್ ರವರು ತಮ್ಮ ಸಂಸ್ಥೆಯಾದ ಗೀತಾನಂದ ಫೌಂಡೇಶನ್ ವತಿಯಿಂದ ನೀಡಿದ
ರೋವರ್ಸ್ ಮತ್ತು ರೇಂಜರ್ಸ್ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿ, ಈ ಸಾಲಿನಲ್ಲಿ ನಿಪುಣ್ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿ ಸುಮಂತ್ ಅವರಿಗೆ ಸಾಂಕೇತಿಕವಾಗಿ ಪ್ರಮಾಣ ಪತ್ರವನ್ನು ಹಾಗೂ 2021ನೇ ಸಾಲಿನ ರಾಜ್ಯ ಪುರಸ್ಕಾರ ಪಡೆದ ರೋವರ್ಸ್ ಸಾಯಿಕಿರಣ್ ಮತ್ತು ರವಿ. ಜೆ, ರೇಂಜರ್ಸ್ ಗಳಾದ ಸೇಚನಾ, ಪ್ರಶೀಮಾ, ತುಳಸಿ, ನಿಶ್ಮಿತಾ, ರಜನಿ, ನಿಶ್ಮಿತಾ ಹಾಗೂ ನಾಗರತಿಯವರಿಗೆ ಪ್ರಮಾಣ ಪತ್ರ ಮತ್ತು ಸ್ಮರಣಿಕೆ ನೀಡಿ ಶಾಲು ಹೊದಿಸಿ ಅಭಿನಂದಿಸಿದರು.

ಸ್ಕೌಟಿಂಗ್ ಚಳುವಳಿಯಿಂದ ಪಡೆದ ಶಿಸ್ತು, ಸಂಯಮ, ಮೌಲ್ಯಗಳನ್ನು ಜೀವನ ಕ್ರಮವಾಗಿ ಅಳವಡಿಸಿಕೊಂಡು ಉಳಿದವರಿಗೆ ಮಾದರಿಯಾಗುವುದರ ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು ಎಂದು
ಕರೆಯಿತ್ತರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್, ರಾಜ್ಯ ಪುರಸ್ಕಾರ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ನೀವು ಉಳಿದ ವಿದ್ಯಾರ್ಥಿಗಳಿಗೆ ಪ್ರೇರಕಶಕ್ತಿಗಳಾಗಿ ಇನ್ನೂ ಹೆಚ್ಚು
ವಿದ್ಯಾರ್ಥಿಗಳು ಇಂತಹ ಪುರಸ್ಕಾರಗಳಿಗೆ ಭಾಜನರಾಗಿ ಸಂಸ್ಥೆಗೆ, ಹೆತ್ತವರಿಗೆ ಕೀರ್ತಿ ತರುವಂತವರಾಗಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ, ಎ.ಎಸ್.ಒ.ಸಿ ಸುಮನ ಶೇಖರ್, ಸಂಪನ್ಮೂಲ ವ್ಯಕ್ತಿ ವಿತೇಶ್ ಕಾಂಚನ್, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ರೋವರ್ ಲೀಡರ್ ಮಂಜುನಾಥ ಆಚಾರಿ ಸ್ವಾಗತಿಸಿ, ಮೇಘನಾ ವಂದನಾರ್ಪಣೆಗೈದರು.

ಕ್ಷಮ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!