Sunday, September 22, 2024
Sunday, September 22, 2024

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Date:

ಕೋಟ: ಮನೆಮನಗಳಲ್ಲಿ ಆದರಣೀಯರಾದ ಮೂರು ಕರಾವಳಿ ಭಾಗದ ರತ್ನಗಳು ಯಶಸ್ವಿ ವೇದಿಕೆಯಲ್ಲಿ ಅಭಿನಂದನೆ ಸಲ್ಲಿಸಿಕೊಳ್ಳುತ್ತಿರುವುದು ನಿಜಕ್ಕೂ ಸ್ತುತ್ಯರ್ಹ.

ಯಶಸ್ವಿ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರನ್ನು ಪ್ರತೀ ವರ್ಷವೂ ಗೌರವಿಸುತ್ತಿರುವುದು ಗಮನಾರ್ಹ. ಇಂತಹ ಸಂಸ್ಥೆ ಸದ್ದಿಲ್ಲದೇ ಹೆಸರು ಮಾಡುತ್ತಿರುವುದು ಆಸಕ್ತ ವಲಯದಲ್ಲಿ, ದೇಶವಿ ದೇಶಗಳಲ್ಲಿ ಎಂಬುದು ಹೆಮ್ಮೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಗೌರವಾನ್ವಿತರಿಗೆ ಅಭಿನಂದನೆ ಸಲ್ಲಿಸಿ ಅಭಿನಂದನಾ ಮಾತುಗಳಲ್ಲಿ ಅಭಿಪ್ರಾಯಪಟ್ಟರು.

ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಆಶ್ರಯದಲ್ಲಿ ರೋಟರಿ ಕ್ಲಬ್ ತೆಕ್ಕಟ್ಟೆ ಇವರಿಂದ ‘ವರ್ಣ ವೈಭವ-21’ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ರಾಜೋತ್ಸವ ಪುರಸ್ಕೃತರಾದ ಮಣೂರು ಮಧುಸೂದನ ಬಾಯರಿ ಹಾಗೂ ನಿವೃತ್ತ ಉಪನ್ಯಾಸಕಿ ಸಾಹಿತಿ ಪಾರ್ವತಿ ಜಿ. ಐತಾಳ್ ಮತ್ತು ವಿಶ್ವ ಕನ್ನಡ ಸಂಘ ಹುಬ್ಬಳ್ಳಿ ಕೊಡಮಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ವೈಷ್ಣವಿ ಪುರಾಣಿಕ್ ಇವರನ್ನು ಅಭಿನಂದನಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು.

ನಿರಂತರ ಚಟುವಟಿಕೆ ನಿರತವಾದ ಸಂಸ್ಥೆ ಯಶಸ್ವಿ ಕಲಾವೃಂದ. ಇಂತಹ ಸಂಸ್ಥೆ ಅಭಿನಂದಿಸುವಾಗ ರಾಜ್ಯ ಪ್ರಶಸ್ತಿ ಕೊಟ್ಟಷ್ಟು ಆನಂದವಾಗುತ್ತದೆ ಎಂದು ಸಾಹಿತಿ ಪಾರ್ವತಿ ಜಿ. ಐತಾಳ್ ಮಾತನಾಡಿದರು.

ಹಲವಾರು ಸಾಂಸ್ಕೃತಿಕ ಚಟುವಟಿಕೆಯಿಂದ ಸಾಂಸ್ಕೃತಿಕ ನಗರಿಯನ್ನಾಗಿಸಿದ ಯಶಸ್ವಿ ಸಂಸ್ಥೆ ಬೆಳ್ಳಿ ಹಬ್ಬದತ್ತ ದಾಪುಗಾಲು ಹಾಕುತ್ತಿದೆ. ಇದನ್ನು ಸಂಭ್ರಮಿಸುವ ಕಾಲಕ್ಕೆ ಶುಭವಾಗಲಿ ಎಂದು ವಿದ್ಯುತ್ ಗುತ್ತಿಗೆದಾರ ಕೋಟ ಶ್ರೀಕಾಂತ್ ಶೆಣೈ ಹಾರೈಸಿದರು.

ಅತಿಥಿಗಳಾಗಿ ನಿವೃತ್ತ ಪ್ರಾದ್ಯಾಪಕ ಶ್ರೀನಿವಾಸ ಅಡಿಗ, ಮಂಜುನಾಥ, ಗಣಪತಿ ಟಿ. ಶ್ರೀಯಾನ್, ಸುಧಾಕರ ಶೆಟ್ಟಿ, ಶಾಂತ ಶೆಟ್ಟಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಹೆರಿಯ ಮಾಸ್ಟರ್ ಮಾತನಾಡಿದರು. ಸೀತಾರಾಮ ಶೆಟ್ಟಿ ಕೊಂಕೂರು ವಂದನಾರ್ಪಣೆ ಮಾಡಿದರು. ಬಳಿಕ ರೋಟರಿ ಕ್ಲಬ್ ತೆಕ್ಕಟ್ಟೆ ಕಲಾವಿದರಿಂದ ‘ವರ್ಣವೈಭವ-21’ ಕಾರ್ಯಕ್ರಮ ರಂಗದಲ್ಲಿ ಪ್ರಸ್ತುತಿಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!