Sunday, February 23, 2025
Sunday, February 23, 2025

ಕೆ.ಎಂ.ಸಿ ಮಣಿಪಾಲ- ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ಉಚಿತ ಪಾದದ ತಪಾಸಣೆ

ಕೆ.ಎಂ.ಸಿ ಮಣಿಪಾಲ- ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ಉಚಿತ ಪಾದದ ತಪಾಸಣೆ

Date:

ಮಣಿಪಾಲ: ವಿಶ್ವಾದಾದ್ಯಂತ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಧುಮೇಹಿಗಳಲ್ಲಿ ಆರೋಗ್ಯದ ಅರಿವು ಉಂಟು ಮಾಡುವುದು, ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿಡುವ ಕ್ರಮ, ಮಧುಮೇಹ ನಿಯಂತ್ರಣದಲ್ಲಿ ಇಡದೇ ಇದ್ದಲ್ಲಿ ಅದರಿಂದ ಆಗುವ ದುಷ್ಪರಿಣಾಮಗಳು ಇವುಗಳ ಬಗ್ಗೆ ಜಾಗ್ರತಿಯನ್ನು ಈ ದಿನದಂದು ಮೂಡಿಸಲಾಗುತ್ತದೆ.

ಈ ವರ್ಷ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಧುಮೇಹ ಪಾದದ ಆರೈಕೆ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಆಂಗವಾಗಿ ನವೆಂಬರ್ 15 ರಿಂದ 19ರ ವರೆಗೆ ಮಧುಮೇಹಿಗಳಿಗಾಗಿ ಉಚಿತ ಪಾದದ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ.

ಪಾದದ ತೊಂದರೆ ಇರುವ ಮಣಿಪಾಲ್ ಆರೋಗ್ಯ ಕಾರ್ಡ್ ಹೊಂದಿದವರಿಗೆ 20% ಕಡಿತದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಈ ಸಮಯದಲ್ಲಿ ಕೋವಿಡ್‍ನ ಎಲ್ಲಾ ಮುಂಜಾಗರೂಕತೆಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿ ಮತ್ತು ಉಚಿತ ತಪಾಸಣೆಯನ್ನು ಕಾದಿರಿಸಲು 0820-2923054 ನಂಬರನ್ನು ಬೆಳಗ್ಗೆ 8.30- ಸಂಜೆ 4.30, ಸೋಮವಾರದಿಂದ ಶನಿವಾರ ಸಂಪರ್ಕಿಸಬಹುದಾಗಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!