Monday, February 24, 2025
Monday, February 24, 2025

ಕಾರ್ಕಳ: ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೂತ್ರಪಿಂಡ (ಕಿಡ್ನಿ) ರೋಗದ ಉಚಿತ ತಪಾಸಣಾ ಶಿಬಿರ

ಕಾರ್ಕಳ: ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೂತ್ರಪಿಂಡ (ಕಿಡ್ನಿ) ರೋಗದ ಉಚಿತ ತಪಾಸಣಾ ಶಿಬಿರ

Date:

ಕಾರ್ಕಳ: ಸೆಪ್ಟೆಂಬರ್ 17ರಂದು ಡಾ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಮೂತ್ರಪಿಂಡ (ಕಿಡ್ನಿ) ರೋಗದ ಉಚಿತ ತಪಾಸಣಾ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ ಕೀರ್ತಿನಾಥ್ ಬಲ್ಲಾಳ ಅವರು ತಿಳಿಸಿದ್ದಾರೆ.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮೂತ್ರಪಿಂಡ ವಿಭಾಗದ ಮುಖ್ಯಸ್ಥರಾದ ಡಾ. ಶಂಕರ್ ಪ್ರಸಾದ್ ಮತ್ತು ಸಹಾಯಕರಾದ ಡಾ ಮೋಹನ್ ಅವರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರವು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದ್ದು, ವೈದ್ಯರ ಸಲಹೆ ಮೇರೆಗೆ ಅವಶ್ಯವುಳ್ಳ ಮೊದಲ 50 ಜನರಿಗೆ ರಕ್ತದಲ್ಲಿನ ಸಕ್ಕರೆ, ಲಿಪಿಡ್ ಪ್ರೊಫೈಲ್, ಸೆರಂ ಎಲೆಕ್ಟ್ರಾಲ್ಯೆಟ್ಸ್, ಸೆರಂ ಕ್ರಿಯೇಟೆನಿನ್ ಮತ್ತು ಮೂತ್ರ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುವುದು.

ಈ ಕೆಳಗಿನ ಲಕ್ಷಣವುಳ್ಳವರು ಶಿಬಿರಕ್ಕೆ ಹಾಜರಾಗಬಹುದು. ಬೆಳಿಗ್ಗೆ ಎದ್ದ ತಕ್ಷಣ ಕಣ್ಣುಗಳ ಸುತ್ತ ಬಾವು, ಕೈ ಮತ್ತು ಮುಖದಲ್ಲಿ ಬಾವು, ಹಸಿವು ಕಡಿಮೆಯಾಗುವುದು, ವಾಂತಿ ಬರುವುದು, ರಾತ್ರಿ ವೇಳೆ ಮೇಲಿಂದ ಮೇಲೆ ಮೂತ್ರ ವಿಸರ್ಜನೆ, ಸಣ್ಣ ವಯಸ್ಸಿನಲ್ಲಿ ಅಧಿಕ ರಕ್ತದ ಒತ್ತಡ, ರಕ್ತದೀನತೆ, ಅಶಕ್ತತೆ, ಮೂತ್ರದಲ್ಲಿ ಊತ, ರಕ್ತ ಅಥವಾ ಕೇವು ಹೋಗುವುದು, ಹೊಟ್ಟೆಯಲ್ಲಿ ಗಂಟು, ಸೊಂಟದಲ್ಲಿ ನೋವು, ಮೂತ್ರ ವಿಸರ್ಜನೆ ಕಷ್ಟವಾಗುವುದು, ಇತ್ಯಾದಿಗಳು ಕಿಡ್ನಿ ರೋಗದ ಲಕ್ಷಣಗಳು.

ಇದರ ಜೊತೆಗೆ ದೀರ್ಘ ಅವಧಿಯಿಂದ ಸಕ್ಕರೆ ಕಾಯಿಲೆವುಳ್ಳವರು ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಳ್ಳಬಹುದು. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೌಲಭ್ಯವಿದ್ದು, ಇದರ ಪ್ರಯೋಜನವನ್ನು ಅವಶ್ಯವುಳ್ಳವರು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ: 9731308293 / 08258 230583 ಕರೆ ಮಾಡಬಹುದು ಎಂದು ಮುಖ್ಯ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!