Home ಸುದ್ಧಿಗಳು ಪ್ರಾದೇಶಿಕ ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಗೋಶಾಲೆ ತೆರೆಯುವ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

640
0

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ನಿರ್ಣಯ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕವೆನಿಸಲಿದೆ. ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀ ಶೀಘ್ರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಅಸ್ತಿತ್ವಕ್ಕೆ ಬರುವ ಮೂಲಕ ರಾಜ್ಯದ ಸುಭಿಕ್ಷತೆಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.