Wednesday, July 29, 2026
Wednesday, July 29, 2026

ಉಡುಪಿ ಬಸ್ ನಿಲ್ದಾಣಗಳಲ್ಲಿ ಮಿತಿ ಮೀರಿದ ಕುಡುಕರ ಹಾವಳಿ

ಉಡುಪಿ ಬಸ್ ನಿಲ್ದಾಣಗಳಲ್ಲಿ ಮಿತಿ ಮೀರಿದ ಕುಡುಕರ ಹಾವಳಿ

Date:

ಉಡುಪಿ: ನಗರದ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಸರ್ವಿಸ್ ಬಸ್ಸು ನಿಲ್ದಾಣ, ಸಿಟಿ ಬಸ್ಸು ನಿಲ್ದಾಣಗಳಲ್ಲಿ ಕುಡುಕರ ಹಾವಳಿ ಮಿತಿ ಮೀರಿದ್ದು, ಕುಡುಕರ ಉಪಟಳದಿಂದ ಉಡುಪಿ ಜಿಲ್ಲೆಗೆ ಬರುವ ಯಾತ್ರಾರ್ಥಿಗಳು, ಪ್ರವಾಸಿಗರು, ಬಸ್ಸು ನಿಲ್ದಾಣಗಳಲ್ಲಿ ವಿಶ್ರಮಿಸಲಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಎಲ್ಲಿಂದರಲ್ಲಿ ಉಗಿದು ಬಸ್ಸು ನಿಲ್ದಾಣದ ಅಂದವನ್ನು ಹಾಳುಗೆಡವಿದ್ದಾರೆ. ಕುಡುಕರು ಪರಿಸರದಲ್ಲಿ ಮಲ ಮೂತ್ರವಿಸರ್ಜನೆ ಮಾಡುವುದರಿಂದ ಗಬ್ಬು ವಾಸನೆ ಹರಡಿದ್ದು, ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ ತಾಣವಾಗಿ ಮಾರ್ಪಟ್ಟಿದೆ.

ಕೊರೊನಾ ತುರ್ತು ಸಂದರ್ಭದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸುವುದು ಕಂಡು ಬರುವುದಿಲ್ಲ. ಪ್ರಯಾಣಿಕರ ಪರ್ಸು, ಮೊಬೈಲ್ ಕಳ್ಳತನ ಪ್ರಕರಣಗಳು ನಿತ್ಯವು ಇಲ್ಲಿ ನಡೆಯುತ್ತಿರುವ ಬಗ್ಗೆಯೂ ದೂರುಗಳು ಕೇಳಿ ಬಂದಿವೆ. ನಗರಸಭೆ ತಕ್ಷಣ ಬಸ್ಸು ನಿಲ್ದಾಣದಲ್ಲಿ ಕಾವಲುಗಾರರನ್ನು ನೇಮಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!