Tuesday, September 24, 2024
Tuesday, September 24, 2024

ವೈದ್ಯಕೀಯ ತಪಾಸಣಾ ಶಿಬಿರ

ವೈದ್ಯಕೀಯ ತಪಾಸಣಾ ಶಿಬಿರ

Date:

ಬ್ರಹ್ಮಾವರ: ನಮ್ಮ ಜೀವನದಲ್ಲಿ ಅತ್ಯಂತ ಮಹತ್ವದ ಕೊಡುಗೆ ಆರೋಗ್ಯ. ಆರೋಗ್ಯದ ಪಾಲನೆ ಸರಿಯಾಗಿ ಮಾಡಿದರೆ ನಮ್ಮ ಜೀವನ ಯಶಸ್ವಿಯಾಗುವುದು ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಅವರು ಬ್ರಹ್ಮಾವರ ಭಾರತೀಯ ಜನೌಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಇದರ ವತಿಯಿಂದ ಇಂದು ನಡೆದ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ಮತ್ತು 75 ಹಿರಿಯ ನಾಗರಿಕರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿಯವರ ಕನಸಿನ ಕಾರ್ಯಕ್ರಮ ಹಿರಿಯ ನಾಗರಿಕರಿಗೆ ಅಭಿನಂದನೆ ಮತ್ತು ಆರೋಗ್ಯ ತಪಾಸಣಾ ಶಿಬಿರ ಕಾರ್ಯ ನಡೆಸುತ್ತಿರುವುದು ಅಭಿನಂದನೀಯ ಎಂದರು.

ವೇದಿಕೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಶೆಟ್ಟಿ, ಮೂಳೆ ರೋಗ ತಜ್ಞ ಡಾ. ಅರ್ಜುನ್ ಬಲ್ಲಾಳ, ಡಾ. ಗಣೇಶ್ ಕಾಮತ್, ಕೆ.ಎಂ.ಸಿ ನೇತ್ರತಜ್ಞರಾದ ಡಾ. ಸೌಮ್ಯ, ಡಾ. ಧನಂಜಯ್ ಭಟ್, ಮಧುಸೂಧನ್ ಹೇರೂರು, ಪ್ರಸನ್ನ ಕಾರಂತ್ ಮುಂತಾದವರಿದ್ದರು.

ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ ಸ್ವಾಗತಿಸಿ, ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ: ವಿಜಯೇಂದ್ರ

ಬೆಂಗಳೂರು, ಸೆ.24: ಮುಖ್ಯಮಂತ್ರಿಗಳ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ...

ಮುಡಾ ಪ್ರಕರಣ- ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ಕೋರ್ಟ್ ಅನುಮತಿ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು...

ಪೌರಕಾರ್ಮಿಕರ ಆರೋಗ್ಯ ತಪಾಸಣಾ ಕಾರ್ಯಕ್ರಮ

ಉಡುಪಿ, ಸೆ.24: ಉಡುಪಿ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ...

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಉಡುಪಿ, ಸೆ.24: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ, ಕನ್ನಡ ಪುಸ್ತಕ...
error: Content is protected !!