Sunday, February 8, 2026
Sunday, February 8, 2026

ಬಜಗೋಳಿ: ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

ಬಜಗೋಳಿ: ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

Date:

ಕಾರ್ಕಳ: ಉಡುಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಮತ್ತು ರೋಟರಿ ಆಸ್ಪತ್ರೆ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಸಂಯುಕ್ತ ಆಶ್ರಯದಲ್ಲಿ ಬಜಗೋಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯವೇ ಭಾಗ್ಯವೆಂಬಂತೆ ಆರೋಗ್ಯ ಅತ್ಯಂತ ಮಹತ್ವದ್ದಾಗಿದೆ. ವೈದ್ಯಕೀಯ ಪ್ರಕೋಷ್ಠದಿಂದ ಉತ್ತಮ ಕಾರ್ಯ ನಡೆಯುತ್ತಿರುವುದು ಅಭಿನಂದನೀಯ ಎಂದರು.

ಅಧ್ಯಕ್ಷತೆಯನ್ನು ಸಂಘಟಕ ಹಾಗೂ ವೈದ್ಯಕೀಯ ಪ್ರಕೋಷ್ಠದ ತಾಲೂಕು ಸಂಚಾಲಕ ಡಾ. ರಾಮದಾಸ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಆಸ್ಪತ್ರೆಯ ಡಾ. ಚಿದಾನಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ಡಾ. ರಾಮಚಂದ್ರ ಕಾಮತ್, ಗ್ರಾ.ಪಂ ಅಧ್ಯಕ್ಷ ಸುರೇಶ್, ಶಾಲಾ ಮುಖ್ಯ ಶಿಕ್ಷಕರು ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ, ಕಣ್ಣು, ಚರ್ಮ ರೋಗ ಸೇರಿದಂತೆ ವಿವಿಧ ವಿಭಾಗದಲ್ಲಿ ಸುಮಾರು 400 ಜನರು ಶಿಬಿರದಲ್ಲಿ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!