Saturday, February 22, 2025
Saturday, February 22, 2025

ಮುನಿಯಾಲು ಆಯುರ್ವೇದ- ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮುನಿಯಾಲು ಆಯುರ್ವೇದ- ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Date:

ಉಡುಪಿ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ನವೆಂಬರ್ 15 ರಿಂದ 20ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ಗಂಟೆಯವರೆಗೆ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗಗಳ ಉಚಿತ ಚಿಕಿತ್ಸಾ ಮತ್ತು ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಬಿ ಶಿಬಿರವನ್ನು ಉದ್ಘಾಟಿಸಿದರು.

ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ಡಾ. ಪ್ರೀತಿ ಪಾಟೀಲ್, ಡಾ. ಅರ್ಚನಾ ಕಲ್ಲೂರಾಯ, ಡಾ. ಮಾಧವಿ, ಡಾ. ರಶ್ಮಿ ಕಲ್ಕೂರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈಗಾಗಲೇ ಅನೇಕ ಮಂದಿ ಈ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ.

ನವೆಂಬರ್ 20 ಶನಿವಾರದವರೆಗೆ ಮುಂದುವರೆಯುವ ಈ ಚಿಕಿತ್ಸಾ ಶಿಬಿರದಲ್ಲಿ ತಜ್ಞ ವೈದ್ಯರು ಆಯುರ್ವೇದ ರೀತ್ಯಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಡ್ವಕೇಟ್‌ ಡಿ. ಕೆ. ಶೆಟ್ಟಿ ನೋಟರಿ ಪಬ್ಲಿಕ್‌ ಆಗಿ ನೇಮಕ

ಮುಂಬಯಿ, ಫೆ.21: ಮುಂಬಯಿಯ ಹಿರಿಯ ವಕೀಲ ಅಡ್ವಕೇಟ್‌ ಡಿ. ಕೆ. ಶೆಟ್ಟಿ...

ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ ಅಧಿಕಾರಿಗಳೊಂದಿಗೆ ಸಭೆ

ಉಡುಪಿ, ಫೆ.21: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಿಸುವ ರೆಡಿಮಿಕ್ಸ್ ಕಾಂಕ್ರೀಟ್ ಘಟಕಗಳ...

ಆಗಮಡಂಬರ ಕೃತಿ ಲೋಕಾರ್ಪಣೆ

ಉಡುಪಿ, ಫೆ.21: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ...

ವಿಕಾಸಕ್ಕಾಗಿ ಜಾನಪದ

ಉಡುಪಿ, ಫೆ.21: ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ...
error: Content is protected !!