Monday, February 24, 2025
Monday, February 24, 2025

ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್

ಪ್ರಕೃತಿ ಚಿಕಿತ್ಸೆಯ ಮೂಲತತ್ವಗಳಿಂದ ಆರೋಗ್ಯ ನಿರ್ವಹಣೆ ಸುಲಭ: ಡಾ. ರಫೀಕ್

Date:

ಮೂಡುಬಿದಿರೆ, ನ.19: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಗ್ರೀಷ್ಮಾ ವಿವೇಕ್ ಆಳ್ವ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ ಅರ್ಚನಾ ಸ್ವಾಗತಿಸಿ, ಡಾನಿಯ ಹಾಗೂ ತಂಡದವರು ಪ್ರಾರ್ಥಸಿ, ಡಾ ಅಕ್ಷತಾ ಧನ್ಯವಾದ ಸಮರ್ಪಿಸಿದರು. ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ರೋಷನ್ ಪಿಂಟೊ, ಯೋಗ ವಿಭಾಗದ ಮುಖ್ಯಸ್ಥೆ ಡಾ ಅರ್ಚನಾ ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!