Friday, September 27, 2024
Friday, September 27, 2024

ಹೆದ್ದಾರಿ ಭೂ ಸ್ವಾಧೀನ: ಪರಿಹಾರ ಕೋರಿಕೆಗೆ ಅರ್ಜಿ ಸಲ್ಲಿಸಲು ಸೂಚನೆ

ಹೆದ್ದಾರಿ ಭೂ ಸ್ವಾಧೀನ: ಪರಿಹಾರ ಕೋರಿಕೆಗೆ ಅರ್ಜಿ ಸಲ್ಲಿಸಲು ಸೂಚನೆ

Date:

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ಕುಂದಾಪುರ ಕಸಬಾ ಗ್ರಾಮದಿಂದ ಕಾಪು ತಾಲೂಕು ಹೆಜಮಾಡಿ ಗ್ರಾಮದವರೆಗೆ ರಾಷ್ಟ್ರ‍ೀಯ ಹೆದ್ದಾರಿ 66(17) ರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ನೋಟೀಸು ನೀಡಿದರೂ, ಕೆಲವು ಭೂ ಮಾಲಕರು ಈವರೆಗೂ ತಮ್ಮ ಹಕ್ಕಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಿ ಪರಿಹಾರಧನ ಪಡೆದಿರುವುದಿಲ್ಲ.

ಬಾಕಿಯಾದ ಭೂಸ್ವಾಧೀನ ಪ್ರಕರಣಗಳ ಮತ್ತು ಬಾಕಿ ಇರುವ ಪರಿಹಾರ ಹಣದ ಬಗ್ಗೆ ಪಟ್ಟಿ ತಯಾರಿಸಿ, ಸಂಬಂಧಪಟ್ಟ ಗ್ರಾಮಕರಣಿಕರ ಹಾಗೂ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇರಿಸಲಾಗಿದೆ.

ಜಮೀನು ಕಳೆದುಕೊಂಡು ಪರಿಹಾರ ಪಡೆಯಲು ಬಾಕಿ ಇರುವ ಸಂತ್ರಸ್ತರು ಸಂಬಂಧಪಟ್ಟ ಗ್ರಾಮ ಕರಣಿಕರಿಂದ ಮಾಹಿತಿ ಪಡೆದು 30 ದಿನಗಳ ಒಳಗೆ ಅಗತ್ಯವುಳ್ಳ ದಾಖಲೆಗಳೊಂದಿಗೆ ಕುಂದಾಪುರ ಸಕ್ರಮ ಪ್ರಾಧಿಕಾರಿಯವರು ರಾ.ಹೆ(17) ಹಾಗೂ ಸಹಾಯಕ ಕಮೀಷನರ್ ಕಚೇರಿಗೆ ಕೋರಿಕೆ ಅರ್ಜಿ ಸಲ್ಲಿಸಿ, ಪರಿಹಾರ ಹಣ ಪಡೆಯುವಂತೆ ಕುಂದಾಪುರ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.26: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಲ್ಲಿ ನೈರ್ಮಲ್ಯ, ಶುಚಿತ್ವ...

ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.26: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ...
error: Content is protected !!