Sunday, February 23, 2025
Sunday, February 23, 2025

ಎಚ್.ಆರ್.ಎಸ್ ಉಡುಪಿ: ನೂತನ ಅಂಬುಲೆನ್ಸ್ ಲೋಕಾರ್ಪಣೆ

ಎಚ್.ಆರ್.ಎಸ್ ಉಡುಪಿ: ನೂತನ ಅಂಬುಲೆನ್ಸ್ ಲೋಕಾರ್ಪಣೆ

Date:

ಕಳೆದ ಹದಿನೇಳು ವರ್ಷದಿಂದ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಾರ್ಯಚರಿಸುವ ಸರಕಾರೇತರ ಸೇವಾ ಸಂಸ್ಥೆ ಎಚ್.ಆರ್.ಎಸ್ ವತಿಯಿಂದ ಗುರುವಾರ ಅಂಬುಲೆನ್ಸ್’ನ್ನು ಲೋಕಾರ್ಪಣೆ ಮಾಡಲಾಯಿತು.

ಉಡುಪಿ ಜಿಲ್ಲಾಸ್ಪತ್ರೆಯ ರೆಸಿಡೆನ್ಸ್ ಡಾಕ್ಟರ್ ಚಂದ್ರಶೇಖರ್ ಅಡಿಗ, ಸರ್ಜನ್ ಸುದೇಶ್ ಕುಮಾರ್ ಅಂಬುಲೆನ್ಸ್’ನ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಚಂದ್ರಶೇಖರ್ ಅಡಿಗ, ಕೋರೊನಾ ಸೋಂಕು ಈ ದೇಶದ ಜನರ ಮೇಲೆ ಬಹಳಷ್ಟು ಪರಿಣಾಮ ಬೀರಿತ್ತು. ಈ ಸಂದರ್ಭದಲ್ಲಿ ಎಚ್.ಆರ್.ಎಸ್ ಸಂಸ್ಥೆ ಕೈಜೋಡಿಸಿ ನಮ್ಮೊಂದಿಗೆ ಕಾರ್ಯಚರಿಸಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಸೇವೆ ಒದಗಿಸಲು ಇದ್ದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ಅವರ ಪಾತ್ರ ಗಮನಾರ್ಹ‌. ಎಚ್.ಆರ್.ಎಸ್ ಕಾರ್ಯಕರ್ತರು ಮುಂಚೂಣಿ ಕಾರ್ಯಕರ್ತರಾಗಿದ್ದು ಎಲ್ಲರೂ ಕೂಡ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದರು.

ಅಝೀಜ್ ಉದ್ಯಾವರ ಮಾತನಾಡಿ, ಜಿಲ್ಲೆಯಲ್ಲಿ ಎಚ್.ಆರ್.ಎಸ್ ಕಾರ್ಯಕರ್ತರು ನಡೆಸಿರುವ ಸೇವಾ ಕಾರ್ಯಗಳ ಕುರಿತು ಪರಿಚಯಿಸಿದರು. ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಸಂಸ್ಥೆಯು ಹಲವು ವಿಭಾಗಗಳಲ್ಲಿ ಕಾರ್ಯಚರಿಸಿದೆ. ಮುಖ್ಯವಾಗಿ ರೋಗಿಗಳಿಗೆ ವೆಂಟಿಲೇಟರ್ ಬೆಡ್ ಒದಗಿಸುವಿಕೆ, ಆಯುಷ್ಮಾನ್ ಕಾರ್ಡ್ ಗಳ ಕುರಿತು ಮಾರ್ಗದರ್ಶನ, ಬ್ಲಡ್ ಪ್ಲೆಟ್ ಲೆಟ್ಸ್, ರಕ್ತದಾನ, ಸಾವಿರಾರು ಮಂದಿಗೆ ರೇಷನ್ ಕಿಟ್, ವೈದ್ಯರಿಂದ ಸಮಾಲೋಚನಾ ಸೇವೆ, ಅಂತ್ಯ ಸಂಸ್ಕಾರಕ್ಕೆ ಸಹಾಯ, ಅಂಬುಲೆನ್ಸ್ ಸೇವೆ, ಮುಂಚೂಣಿ ಕಾರ್ಯಕರ್ತರಿಗೆ ಸುರಕ್ಷಾ ಸಾಧನಗಳನ್ನು ವಿತರಿಸಲಾಗಿದೆ. ಈ ಎಲ್ಲ ಕಾರ್ಯಗಳಿಗೆ ನಮಗೆ ಕುರಾನಿನ ಸೂಕ್ತವಾದ ‘ಒಬ್ಬ ವ್ಯಕ್ತಿಯ ಜೀವ ಉಳಿಸಿದರೆ ಇಡೀ ಮಾನವ ಕುಲದ ಜೀವ ಉಳಿಸಿದಂತೆ’ ಎಂಬುವುದು ಪ್ರೇರಣೆಯಾಗಿದೆ ಎಂದರು.

ಎಚ್.ಆರ್.ಎಸ್ ಕ್ಯಾಪ್ಟನ್ ಅಮೀರ್ ಅವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಜಾಮೀಯಾ ಮಸೀದಿಯ ಅಧ್ಯಕ್ಷ ಅರ್ಶದ್, ಎಚ್.ಆರ್.ಎಸ್ ಉಡುಪಿ ಜಿಲ್ಲಾ ಹೊಣೆಗಾರರಾದ ಹಸನ್ ಕೋಡಿಬೆಂಗ್ರೆ, ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಜಿಲ್ಲಾಧ್ಯಕ್ಷರಾದ ಶಬ್ಬಿರ್ ಮಲ್ಪೆ, ಅನ್ವರ್ ಅಲಿ ಕಾಪು, ಮಹಮ್ಮದ್ ರೆಹಾನ್ ಗಂಗೊಳ್ಳಿ, ಹಸನ್ ಮವಾಡ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!