Sunday, September 29, 2024
Sunday, September 29, 2024

ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಮಾಹಿತಿ

ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಮಾಹಿತಿ

Date:

ಉಡುಪಿ: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಉದ್ಯೋಗಿನಿ ಯೋಜನೆ: 18 ರಿಂದ 55 ವರ್ಷ ವಯಸ್ಸಿನ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ 2.00 ಲಕ್ಷ ಆದಾಯ ಹಾಗೂ ಇತರೆ ವರ್ಗದ 1.50 ಲಕ್ಷ ಆದಾಯ ಹೊಂದಿರುವ ಮಹಿಳೆಯರು ಆದಾಯೋತ್ಪನ್ನಕರ ಚಟುವಟಿಕೆ ಕೈಗೊಳ್ಳಲು ರಾಷ್ಟ್ರ‍ೀಕೃತ ಬ್ಯಾಂಕಿನಿಂದ ನೀಡುವ ಗರಿಷ್ಠ 3.00 ಲಕ್ಷ ಸಾಲಕ್ಕೆ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಹಿಳೆಯರಿಗೆ ಗರಿಷ್ಠ ರೂ.150000/- ಹಾಗೂ ಇತರೆ ವರ್ಗದ ಮಹಿಳೆಯರಿಗೆ ಗರಿಷ್ಠ ರೂ.90000/-
ಸಹಾಯಧನವನ್ನು ನೀಡಲಾಗುವುದು.

ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ: ಸದರಿ ಯೋಜನೆಯಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಬ್ಯಾಂಕಿನಿAದ ನೀಡುವ ಗರಿಷ್ಠ ರೂ 3.00ಲಕ್ಷ ಸಾಲಕ್ಕೆ ಗರಿಷ್ಠ ರೂ.150000/- ಸಹಾಯಧನ ನೀಡಲಾಗುವುದು.

ಕಿರುಸಾಲ ಯೋಜನೆ: ಸ್ತ್ರೀಶಕ್ತಿ ಗುಂಪುಗಳು ಆರ್ಥಿಕ್ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಕನಿಷ್ಠ ರೂ 2.00ಲಕ್ಷ ಉಳಿತಾಯ ಹಾಗೂ ಪ್ರಸ್ತುತ ಬ್ಯಾಂಕ್ ಸಾಲ ಪಡೆಯದ ಗುಂಪುಗಳಿಗೆ ಬಡ್ಡಿ ರಹಿತ ರೂ 2.00ಲಕ್ಷ ಸಾಲ ನೀಡಲಾಗುವುದು.

ಧನಶ್ರೀ ಯೋಜನೆ: 18 ರಿಂದ 60 ವಯೋಮಿತಿಯ ಹೆಚ್.ಐ.ವಿ ಸೋಂಕಿತ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ರೂ.30000/-ಗಳ ಪ್ರೋತ್ಸಾಹಧನ ನೀಡಲಾಗುವುದು.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: 18 ರಿಂದ 60 ವಯೋಮಿತಿಯ ಸದ್ರಿ ಸಮುದಾಯದವರು ಸ್ವ-ಉದ್ಯೋಗ ಕೈಗೊಳ್ಳಲು ರೂ 30000/-ಗಳ ಪ್ರೋತ್ಸಾಹಧನ ನೀಡಲಾಗುವುದು.

ಈ ಎಲ್ಲಾ ಯೋಜನೆಗಳ ಕುರಿತು ಅರ್ಜಿಗಳನ್ನು ಆಹ್ವಾನಿಸಿದ್ದು, ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದು ದಿನಾಂಕ:04-09-2021ರೊಳಗೆ ಸಲ್ಲಿಸತ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ:0820-2574978 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!