Monday, October 7, 2024
Monday, October 7, 2024

ಕೆಮ್ಮಣ್ಣು: ರೋಟರಾಕ್ಟ್ ಮತ್ತು ಇಂಟರಾಕ್ಟ್ ಪದಗ್ರಹಣ ಸಮಾರಂಭ

ಕೆಮ್ಮಣ್ಣು: ರೋಟರಾಕ್ಟ್ ಮತ್ತು ಇಂಟರಾಕ್ಟ್ ಪದಗ್ರಹಣ ಸಮಾರಂಭ

Date:

ಕೆಮ್ಮಣ್ಣು: ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಸರ್ಕಾರಿ ಹೈಸ್ಕೂಲು ಕೆಮ್ಮಣ್ಣು ಇಲ್ಲಿ ನ ರೋಟರಾಕ್ಟ್ ಹಾಗೂ ಇಂಟರಾಕ್ಟ್ ಕ್ಲಬ್ ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಡೆಯಿತು. ಈ ಎರಡು ಸಂಸ್ಥೆಗಳ ನೂತನ ಅಧ್ಯಕ್ಷರುಗಳಾದ ಆಕಾಶ್ ಕೋಟ್ಯಾನ್, ತಸ್ರೀನ್ ಹಾಗೂ ಕಾರ್ಯದರ್ಶಿಗಳಾದ ಶಾಂತ, ಪ್ರಜ್ಞಾ ಇವರಿಗೆ ರೋಟರಿ ಕ್ಲಬ್ಬಿನ ಅಧ್ಯಕರಾದ ಶಂಭು ಶಂಕರ್ ರವರು ಪದಪ್ರದಾನ ನೆರವೇರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಅಲೆನ್ ಲೂವಿಸ್ ರವರು ರೋಟರಿ ಸಂಸ್ಥೆಯ ಸೇವೆ ಮತ್ತು ಯೋಜನೆಗಳ ಕುರಿತು ಮಾತನಾಡಿ, ರೋಟರಾಕ್ಟ್ ಮತ್ತು ಇಂಟರಾಕ್ಟ್ ಸಂಸ್ಥೆಯ ಧ್ಯೇಯ ಹಾಗೂ ಉದ್ದೇಶಗಳ ಕುರಿತು ಮಾಹಿತಿ ನೀಡಿದರು. ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆಯ ಅವಕಾಶ ಮತ್ತು ಪ್ರಯೋಜನಗಳ ಬಗ್ಗೆ ತಿಳಿ ಹೇಳಿ ನೂತನ ಪದಾಧಿಕಾರಿಗಳನ್ನು ಹಾಗೂ ಅವರ ತಂಡವನ್ನು ಅಭಿನಂದಿಸಿದರು.

ಶಾಲಾ ಮುಖ್ಯೋಪಾಧ್ಯಾಯ ರಾದ ಕ್ಸೇವಿಯರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ, ರೋಟರಿ ಸಂಸ್ಥೆಯ ಸಹಕಾರವನ್ನು ಸ್ಮರಿಸಿದರು. ಮತ್ತು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯ ಪ್ರಾಮುಖ್ಯತೆ ಕುರಿತು ತಿಳಿಸಿದರು.

ಅಧ್ಯಾಪಕರು ರೋಟರಾಕ್ಟ್ ಸಂಯೋಜಕರೂ ಆದ ವಿನಯ ದೇವಾಡಿಗ ಅವರು ಸಭಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು. ಕಾರ್ಯದರ್ಶಿಗಳಾದ ಪ್ರಕಾಶ್, ರೋಟರಾಕ್ಟ್ ಸಭಾಪತಿ ವಿಜಯ್ ಮಯ್ಯಾಡಿ, ರಾಮ ಪೂಜಾರಿ ಹಾಗೂ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ನಂದಕಿಶೋರ್ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ

ಉಡುಪಿ, ಅ.6: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ...

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ನೀರಿನಲ್ಲಿ ಜೀವಿಸುವ ಪಕ್ಷಿಗಳ ಅಂಚೆ ಚೀಟಿ ಪ್ರದರ್ಶನ

ಬಾರಕೂರು, ಅ. 6: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಅಮೃತೇಶ್ವರಿ ದೇಗುಲ: ಶರನ್ನವರಾತ್ರಿ ಉತ್ಸವ

ಕೋಟ, ಅ.6: ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ...
error: Content is protected !!