Friday, October 4, 2024
Friday, October 4, 2024

ಒಳಕಾಡು: ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಒಳಕಾಡು: ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

Date:

ಉಡುಪಿ: ರೋಟರಿ ಕ್ಲಬ್ ಉಡುಪಿ ವತಿಯಿಂದ ಒಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಹೇಮಂತ್ ಯು ಕಾಂತ್ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಮಾತನಾಡಿ, ಪರಿಸರ ಉಳಿದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ. ಪ್ರತಿಯೊಬ್ಬರು ತಮ್ಮ ಕರ್ತವ್ಯವನ್ನು ಅರಿತು ಪರಿಸರಕ್ಕೆ ಪೂರಕವಾದ ಕಾರ್ಯ ಮಾಡಬೇಕು. ನಾವು ಬದಲಾದರೆ ಮಾತ್ರ ದೇಶ ಬದಲಾಗುತ್ತದೆ. ವಿದ್ಯಾರ್ಥಿಗಳು ವರ್ಷಕ್ಕೆ ಕನಿಷ್ಠ ಒಂದು ಗಿಡವನ್ನಾದರೂ ಬೆಳೆಸಿ ಪೋಷಿಸಬೇಕು. ಪರಿಸರ ರಕ್ಷಣೆಯ ಪಾಠ ಮನೆಯಿಂದ ಪ್ರಾರಂಭವಾಗಲಿ ಎಂದರು.

ಪದ ಪ್ರಧಾನ ಅಧಿಕಾರಿ ಜಿಲ್ಲಾ ಇಂಟರಾಕ್ಟ್ ಸಭಾಪತಿ ಜೈವಿಠಲ್ ಮಾತನಾಡಿ, ವ್ಯಕ್ತಿತ್ವ ವಿಕಸನ ಸಮಾಜ ಸೇವೆಯ ಅಭಿರುಚಿ ಇಂಟರಾಕ್ಟ್ ನಿಂದ ವಿದ್ಯಾರ್ಥಿಗಳಿಗೆ ಲಭಿಸುತ್ತದೆ. ಇದರ ಪ್ರಯೋಜನ ಪಡೆಯುವಂತೆ ಕರೆ ನೀಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ನಿರ್ಮಲಾ ಬಿ, ಕಾರ್ಯದರ್ಶಿ ಜೆ. ಗೋಪಾಲಕೃಷ್ಣ ಪ್ರಭು, ಇಂಟರಾಕ್ಟ್ ಸಂಯೋಜಕಿ ವನಿತಾ ಉಪಾಧ್ಯಾಯ, ಇಂಟರಾಕ್ಟ್ ನೂತನ ಅಧ್ಯಕ್ಷೆ ಚೈತ್ರ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!