Friday, September 20, 2024
Friday, September 20, 2024

ಹಲಸು ಮೇಳ ಉದ್ಘಾಟನೆ

ಹಲಸು ಮೇಳ ಉದ್ಘಾಟನೆ

Date:

ಉಡುಪಿ: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು.

ಅವರು ಇಂದು ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಠವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂಧ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ. ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು.

ಮೇಳದಲ್ಲಿ ತೂಬುಗೆರೆಯ ಹಲಸು, ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.

ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪವು ಲಭ್ಯವಿತ್ತು.

ಕಾರ್ಯಕ್ರಮದಲ್ಲಿ ಸಿಇಓ ಪ್ರಸನ್ನ ಎಚ್. ಮಾತನಾಡಿ, ಸರ್ಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ ಅದರ ಭಾಗವಾಗಿ ಹಲಸು ಮೇಳವು ಒಂದಾಗಿದೆ. ಸಾರ್ವಜನಿಕರು ತಮಗೆ ಇಷ್ಠವಾದ ನಮೂನೆಯ ಹಲಸನ್ನು ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ.

ಈ ಮೇಳವು 2 ದಿನಗಳ ವರೆಗೆ ನಡೆಯಲಿದ್ದು, ರೈತರು ತಾವು ಬೆಳದ ಹಲಸನ್ನು ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಮತ್ತಿರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!