Thursday, February 27, 2025
Thursday, February 27, 2025

ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ ಐಐಟಿಗೆ ಪ್ರವೇಶ

ಜ್ಞಾನಸುಧಾ ಇಬ್ಬರು ವಿದ್ಯಾರ್ಥಿಗಳಿಗೆ ಐಐಟಿಗೆ ಪ್ರವೇಶ

Date:

ಕಾರ್ಕಳ, ಜು. 29: ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜು ಗಣಿತನಗರದ ಇಬ್ಬರು ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐ.ಐ.ಟಿ)ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐ.ಐ.ಟಿ) ಪ್ರವೇಶಕ್ಕೆ ನಡೆದಿದ್ದ ಜೆ.ಇ.ಇ ಅಡ್ವಾನ್ಸ್ನ ಫಲಿತಾಂಶದಲ್ಲಿ ವಿದ್ಯಾರ್ಥಿಗಳಾದ ಧನ್ವಿತ್ ನಾಯಕ್ ಆಲ್ ಇಂಡಿಯಾ (ಜನರಲ್ ಮೆರಿಟ್) 3918 ನೇ ರ‍್ಯಾಂಕನ್ನು ಮತ್ತು ಸಮೃದ್ದ್ನೆಲ್ಲಿ ಆಲ್ ಇಂಡಿಯಾ (ಜನರಲ್‌ಮೆರಿಟ್) 5769 ನೇ ರ‍್ಯಾಂಕ್ ಪಡೆದು ಪ್ರತಿಷ್ಠಿತ ಐ.ಐ.ಟಿ ಖರಗ್‌ಪುರಕ್ಕೆ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಪ್ರವೇಶಗಿಟ್ಟಿಸಿಕೊಂಡಿದ್ದಾರೆ.

ಕೆ.ಸಿ.ಇ.ಟಿ. ಇಂಜಿನಿಯರಿಂಗ್‌ನಲ್ಲಿಯೂ ಧನ್ವಿತ್ ನಾಯಕ್ 87 ನೇ ರ‍್ಯಾಂಕನ್ನು, ಸಮೃದ್ದ್ನೆಲ್ಲಿ 349 ನೇ ರ‍್ಯಾಂಕ್ ಗಳಿಸಿದ್ದರು. ಈಗಾಗಲೇ ಜ್ಞಾನಸುಧಾಕೆ ಜೆ.ಇ.ಇ ಅಡ್ವಾನ್ಸ್ನಲ್ಲಿ ರಾಷ್ಟ್ರಮಟ್ಟದಲ್ಲಿ ಹತ್ತು ಸಾವಿರದೊಳಗೆ 10 ರ‍್ಯಾಂಕ್, ನೀಟ್ ಪರೀಕ್ಷೆಯಲ್ಲಿ 93 ವಿದ್ಯಾರ್ಥಿಗಳು 500ಕ್ಕಿಂತ ಅಧಿಕ ಅಂಕವನ್ನು, ಸಿ.ಇ.ಟಿಯಲ್ಲಿ 105 ವಿದ್ಯಾರ್ಥಿಗಳು 5 ಸಾವಿರದೊಳಗಿನ ರ‍್ಯಾಂಕನ್ನು ಗಳಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!