ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು ಬ್ರಹ್ಮಕಲಶದ ಕಾರ್ಯಯೋಜನೆ ಸಿದ್ದಗೊಳ್ಳುತಿದ್ದು ಈ ಬಗ್ಗೆ ಸಮಿತಿಯ ಸಾಮ್ರಾಟ್ ಗೌರವಾಧ್ಯಕ್ಷರನ್ನಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಆಯ್ಕೆ ಮಾಡಿದ್ದು ಅವರನ್ನು ಭೇಟಿಯಾಗಿ ಅನುಮತಿ ಹಾಗೂ ಆಶೀರ್ವಾದ ಪಡೆಯಲಾಯಿತು.

ಶ್ರೀ ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ದೇವತಾ ಅನುಗ್ರಹ ಯಾಚಿಸಲಾಯಿತು. ಅಭಿವೃದ್ಧಿ ಮತ್ತು ಬ್ರಹ್ಮಕಲಶ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಹರೀಶ್ ಹೊಳ್ಳ, ಕಾರ್ಯದರ್ಶಿ ಚಂದ್ರಶೇಖರ ಬೈಕಾಡಿ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಅಶೋಕ್ ಶೆಟ್ಟಿಗಾರ್, ಬ್ರಹ್ಮಕಲಶ ಸಮಿತಿಯ ರಾಜೇಶ್ ತಿಂಗಳಾಯ, ಮಹೇಶ್ ಕುಂದರ್ ಉಪಸ್ಥಿತರಿದ್ದರು.





By
ForthFocus™