Friday, October 4, 2024
Friday, October 4, 2024

ಎಪಿಐ ಕರ್ನಾಟಕ ಚಾಪ್ಟರ್ ವಾರ್ಷಿಕ ಸಮ್ಮೇಳನ-ಕಾಪಿಕಾನ್ 2020-21

ಎಪಿಐ ಕರ್ನಾಟಕ ಚಾಪ್ಟರ್ ವಾರ್ಷಿಕ ಸಮ್ಮೇಳನ-ಕಾಪಿಕಾನ್ 2020-21

Date:

ಮಣಿಪಾಲ: ಎಪಿಐ ಉಡುಪಿ- ಮಣಿಪಾಲ ಚಾಪ್ಟರ್ ಮತ್ತು ಕೆಎಂಸಿ ಮಣಿಪಾಲ ವೈದ್ಯಕೀಯ ವಿಭಾಗ, ಮಾಹೆ  ಮಣಿಪಾಲದ ಸಂಯುಕ್ತ ಆಶ್ರಯದಲ್ಲಿ ಹೋಟೆಲ್ ಮಣಿಪಾಲ್ ಇನ್ ನಲ್ಲಿ ಎಪಿಐ ಕರ್ನಾಟಕ  ಚಾಪ್ಟರ್ ವಾರ್ಷಿಕ ಸಮ್ಮೇಳನ- ಕಾಪಿಕಾನ್ 2020-21 ನಡೆಯಿತು. “ಉದಯೋನ್ಮುಖ ಸವಾಲುಗಳಿಗೆ ವೈದ್ಯರನ್ನು ಸಬಲೀಕರಣಗೊಳಿಸುವುದು” ಸಮ್ಮೇಳನದ ಧ್ಯೇಯ ವಾಕ್ಯವಾಗಿತ್ತು. ಸಮ್ಮೇಳನದ ಉದ್ಘಾಟನೆಯನ್ನು ಮುಖ್ಯ ಅತಿಥಿಯಾಗಿದ್ದ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್ ಬಲ್ಲಾಳ್ ನೆರವೇರಿಸಿದರು.

ಮಾಹೆ ಮಣಿಪಾಲದ ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್, ಸಹ ಕುಲಪತಿ ಆರೋಗ್ಯ ವಿಜ್ಞಾನಗಳಾದ ಡಾ. ಪಿ ಎಲ್ ಎನ್ ಜಿ ರಾವ್, ಕೆಎಂಸಿ ಡೀನ್ ಡಾ. ಶರತ್ ಕೆ ರಾವ್ ಗೌರವ ಅಥಿತಿಗಳಾಗಿ ಪಾಲ್ಗೊಂಡಿದ್ದರು. ಡಾ. ಶರತ್ ಕೆ ರಾವ್ ರವರು ಉದ್ಘಾಟನಾ ಭಾಷಣ ಮಾಡಿದರು.

ಕರ್ನಾಟಕ ಎಪಿಐ ಚಾಪ್ಟರ್ ನ ಮುಖ್ಯಸ್ಥರಾದ ಡಾ. ವಿ ಎ ಕೋಥಿವಾಳೆ, ಚುನಾಯಿತ ಕಾಪಿಕಾನ್ 2020-21ರ ವಿಜ್ಞಾನ ಸಮಿತಿಯ ಮುಖ್ಯಸ್ಥರಾದ ಡಾ. ಎಚ್ ಕೆ ರಾಜಶೇಖರ್, ಕರ್ನಾಟಕ ಎಪಿಐ ಚಾಪ್ಟರ್ ನ ಕಾರ್ಯದರ್ಶಿಗಳಾದ ಡಾ. ಎಂ ನಾರಾಯಣಸ್ವಾಮಿ, ಕಾಪಿಕಾನ್ 2020-21ರ ಸಂಘಟನಾ ಮುಖ್ಯಸ್ಥರಾದ ಡಾ. ಸುಧಾ ವಿದ್ಯಾಸಾಗರ್, ಸಂಘಟನಾ ಕಾರ್ಯದರ್ಶಿ ಡಾ. ಶಿವಶಂಕರ್ ಕೆಎನ್, ಜೊತೆ ಕಾರ್ಯದರ್ಶಿಗಳಾದ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ರವಿರಾಜ್ ಆಚಾರ್ಯ, ಆದರ್ಶ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಉಪಸ್ಥಿತರಿದ್ದರು. ಡಾ.ಶಿವಶಂಕರ್ ಕೆ.ಎನ್ ಅವರು ಸಮಾರೋಪ ಭಾಷಣ ಮಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಂಪ್ ರೋಪ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಉಡುಪಿ, ಅ.3: ಶಾಲಾ ಶಿಕ಼ಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು...

ಅಕ್ಟೋಬರ್ ನಲ್ಲಿ ಧೂಮಕೇತುಗಳ ಮೆರವಣಿಗೆ

ಧೂಮಕೇತು ಸುಚಿನ್ಸಾನ್ ಅಟ್ಲಾಸ್ ಮತ್ತು ಸನ್ಗ್ರೇಸರ್ ಅಟ್ಲಾಸ್ ಈಗ ಸಪ್ಟಂಬರ್ ಅಕ್ಟೋಬರ್...

ಕರಾವಳಿ ಭದ್ರತಾ ತರಬೇತಿ ಸಂಪನ್ನ

ಉಡುಪಿ, ಅ.3: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ...

ಆಳ್ವಾಸ್ ವಿದ್ಯಾರ್ಥಿಗಳಿಂದ ಮಣಿಪಾಲದ ಅಂಗರಚನಾಶಾಸ್ತ್ರ ಪ್ರಯೋಗಾಲಯ ಹಾಗೂ ಉದಯವಾಣಿಯ ಕೇಂದ್ರ ಕಚೇರಿಗೆ ಭೇಟಿ

ಮೂಡುಬಿದಿರೆ, ಅ.3: ಆಳ್ವಾಸ್ ಕಾಲೇಜಿನ ಪದವಿ ಮನೋವಿಜ್ಞಾನ ಮತ್ತು ಪತ್ರಿಕೋದ್ಯಮ ವಿಭಾಗದ...
error: Content is protected !!