Tuesday, February 25, 2025
Tuesday, February 25, 2025

ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯದ ಹಿಂದೆ ಯೋಧರ ತ್ಯಾಗ, ಬಲಿದಾನವಿದೆ: ಶಾಸಕ ವೇದವ್ಯಾಸ್ ಕಾಮತ್

ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯದ ಹಿಂದೆ ಯೋಧರ ತ್ಯಾಗ, ಬಲಿದಾನವಿದೆ: ಶಾಸಕ ವೇದವ್ಯಾಸ್ ಕಾಮತ್

Date:

ಮಂಗಳೂರು: ನಾವು ಅನುಭವಿಸುತ್ತಿರುವ ಈಗಿನ ಸ್ವಾತಂತ್ರ್ಯದ ಹಿಂದೆ ಯೋಧರ ತ್ಯಾಗ ಮತ್ತು ಬಲಿದಾನವಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದರು.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಕಾರ್ಗಿಲ್ ವಿಜಯ ದಿವಸ್ ಹಾಗೂ ಅಗ್ನಿಪಥ್ ಅಭಿವಿನ್ಯಾಸ ಕಾರ್ಯಕ್ರಮವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಸೈನಿಕರ ತ್ಯಾಗ, ಸಾಹಸ ಹಾಗೂ ದೇಶಸೇವೆ ಮಾಡುವ ಉತ್ತಮ ಅವಕಾಶಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಸಂಪನ್ಮೂಲ ವ್ಯಕ್ತಿ, ನಿವೃತ್ತ ಸೈನಿಕರಾದ ವಿಜಯನ್
ಮಾತನಾಡಿ, ಅಗ್ನಿಪಥ್ ಹಾಗೂ ಭಾರತೀಯ ಸೈನ್ಯದ ಹಲವು ಹುದ್ದೆಗಳಿಗೆ ಸೇರಲು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.

ಮುಖ್ಯ ಅತಿಥಿ, ನಿವೃತ್ತ ಸೈನಿಕರಾದ ಶಿವರಾಮ್ ಭಟ್ ಅವರು ಭಾರತೀಯ ಸೈನ್ಯಕ್ಕೆ ಸೇರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ವಹಿಸಿ ಮಾತನಾಡಿದರು.

ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ನಿವೃತ್ತ ಸೈನಿಕರಾದ ಜೆಫ್ರಿ ರಾಡ್ರಿಗ್ರಸ್ ಕೆ. ಅವರು ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿದ ಭೂಸೇನೆ, ವಾಯುಸೇನೆ ಹಾಗೂ ನೌಕಾಪಡೆಯ ಮೂವರು ಯೋಧರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ರಾಜೇಂದ್ರ ಕುಮಾರ್ ಮತ್ತು ರಮೇಶ್ ಹೆಗ್ಡೆ, ಕಾಲೇಜು ವಿದ್ಯಾರ್ಥಿ ಕ್ಷೇಮಪಾಲಕರಾದ ಡಾ. ಸುಧಾಕರನ್ ಟಿ. ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಡಾ. ನವೀನ್ ಕೊಣಾಜೆ ನಿರೂಪಿಸಿದರು. ಲೋಹಿತ್ ಸ್ವಾಗತಿಸಿ, ಶಿವಾನಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!