Monday, July 27, 2026
Monday, July 27, 2026

ಕೃಷಿ ಪಂಡಿತ ಪ್ರಶಸ್ತಿ: ರೈತರಿಂದ ಅರ್ಜಿ ಆಹ್ವಾನ

ಕೃಷಿ ಪಂಡಿತ ಪ್ರಶಸ್ತಿ: ರೈತರಿಂದ ಅರ್ಜಿ ಆಹ್ವಾನ

Date:

ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು, ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂನ್ 20 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ. 1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50,000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!