Wednesday, October 2, 2024
Wednesday, October 2, 2024

ಲಯನ್ಸ್ ಕ್ಲಬ್ ಉಡುಪಿ ಪದಪ್ರದಾನ

ಲಯನ್ಸ್ ಕ್ಲಬ್ ಉಡುಪಿ ಪದಪ್ರದಾನ

Date:

ಉಡುಪಿ: ಲಯನ್ಸ್ ಸಂಸ್ಥೆಯು ಸಾರ್ವಜನಿಕ ಸಂಪರ್ಕ, ಸಮಾಜ ಸೇವೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ವಿಪುಲ ಅವಕಾಶ ಕಲ್ಪಿಸುತ್ತದೆ ಎಂದು ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಮತ್ತು ಲಯನ್ಸ್ ಜಿಲ್ಲೆ 317 ಸಿಯ ಮೆಂಟರ್ ಜಯಕರ್ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ಲಯನ್ಸ್ ಕ್ಲಬ್ ಉಡುಪಿಯ ನೂತನ ಅಧ್ಯಕ್ಷ ಡಯನಾ‌ ಎಂ.ವಿಠಲ್ ಪೈ, ಕಾರ್ಯದರ್ಶಿ ಪಿ. ವಿಷ್ಣುದಾಸ್ ಪಾಟೀಲ್, ಕೋಶಾಧಿಕಾರಿ ಶ್ರೀಧರ ಭಟ್ ಮತ್ತವರ ತಂಡದ ಪದಪ್ರದಾನ ಸಮಾರಂಭದಲ್ಲಿ ಪದಗ್ರಹಣ ಅಧಿಕಾರಿಯಾಗಿ ಮಾತನಾಡಿದರು.

ನೂತನ ಸದಸ್ಯರಾಗಿ‌ ಸೇರ್ಪಡೆಗೊಂಡ ಅತುಲ್ ಎಂ. ಭಕ್ತ, ಅಬ್ದುಲ್ ಇಲಿಯಾಸ್ ಮತ್ತು ರಾಮದಾಸ್ ಪ್ರಭು ಅವರಿಗೆ ಜಯಕರ್ ಶೆಟ್ಟಿ‌ ಇಂದ್ರಾಳಿ ಪ್ರತಿಜ್ಞಾ ವಿಧಿ ಬೋಧಿಸಿದರು. ನೂತನ ಅಧ್ಯಕ್ಷ ಡಯನಾ ಎಂ. ವಿಠಲ್ ಪೈ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಹಮ್ಮಿಕೊಳ್ಳಲಿರುವ ಪರಿಸರಸ್ನೇಹಿ ಹಾಗೂ ಜನೋಪಯೋಗಿ ಕಾರ್ಯಕ್ರಮಗಳ ವಿವರ ನೀಡಿದರು. ಈ ವೇಳೆ ಲಯನಿಸಂ‌ನಲ್ಲಿ ಸಲ್ಲಿಸಿದ ಸುದೀರ್ಘ ಸೇವೆಗಾಗಿ‌ ಜಯಕರ್ ಶೆಟ್ಟಿ ಇಂದ್ರಾಳಿ ಅವರನ್ನು ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಸನ್ಮಾನಿಸಲಾಯಿತು.

ಮಾಜಿ ಜಿಲ್ಲಾ ಗವರ್ನರ್ ಡಾ. ಎ. ರವೀಂದ್ರನಾಥ್ ಶೆಟ್ಟಿ ಅವರು ವಜ್ರ ಮಹೋತ್ಸವ ಯೋಜನೆಗಳ‌ ಯಶಸ್ಸಿಗೆ ಕಾರಣರಾದ ಪದಾಧಿಕಾರಿಗಳ ಶ್ರಮವನ್ನು ಶ್ಲಾಘಿಸಿದರು. ವಿಠಲ ಪೈ ಅವರು ಲಯನ್ಸ್ ಕ್ಲಬ್ ಉಡುಪಿಯ ವಜ್ರ ಮಹೋತ್ಸವ ಸಮಿತಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ, ಕಾರ್ಯಾಧ್ಯಕ್ಷ ರಾಜಗೋಪಾಲ್ ಎಸ್., ಕಾರ್ಯದರ್ಶಿ ಎ. ದಿನೇಶ್ ಕಿಣಿ ಮತ್ತು ಕೋಶಾಧಿಕಾರಿ ಲೂಯಿಸ್ ಲೋಬೊ ಅವರನ್ನು ಸನ್ಮಾನಿಸಿದರು.

ಲಿಯೊ ಕ್ಲಬ್ ಅಧ್ಯಕ್ಷ ಭುವನ್ ಸಂಕೊಳ್ಳಿ, ಕಾರ್ಯದರ್ಶಿ ಅಭಿನವ್ ಕಿಣಿ, ಕೋಶಾಧಿಕಾರಿ ಜೇಸನ್ ಫೆರ್ನಾಂಡೀಸ್, ಲಯನ್ ಲೇಡಿ ಕೌನ್ಸಿಲ್‌ನ ಅಧ್ಯಕ್ಷೆ ಮಾಯಾ ಪೈ, ಕಾರ್ಯದರ್ಶಿ ಅಲ್ಕಾ ಕಾಮತ್ ಅವರ ಪದಪ್ರಧಾನ ಸಮಾರಂಭವೂ ಇದೇ ವೇಳೆ ನಡೆಯಿತು.

ನಿರ್ಗಮನ ಅಧ್ಯಕ್ಷ ಪ್ರಸಾದ್ ಶೆಟ್ಟಿ ವರ್ವಾಡಿ ಸ್ವಾಗತಿಸಿ, ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು. ಲಯನ್ಸ್ ಪ್ರಾಂಥೀಯ ಅಧ್ಯಕ್ಷ ಪಾಂಡುರಂಗ ಆಚಾರ್ ಶುಭಾಶಂಸನೆಗೈದರು. ನಿರ್ಗಮನ ಕಾರ್ಯದರ್ಶಿ ‌ಅಲೆವೂರು ದಿನೇಶ್ ಕಿಣಿ ವಾರ್ಷಿಕ ಚಟುವಟಿಕೆಗಳ ವರದಿ ಮಂಡಿಸಿದರು. ಹರೀಶ್ ಕಿಣಿ ಪದಗ್ರಹಣ ಅಧಿಕಾರಿಯನ್ನು ಪರಿಚಯಿಸಿದರು.

ಲಯನ್ ಲೇಡಿ ಕೌನ್ಸಿಲ್‌ನ ನಿರ್ಗಮನ ಅಧ್ಯಕ್ಷೆ ರೂಪಾ ಡಿ. ಕಿಣಿ, ಕಾರ್ಯದರ್ಶಿ ಚಂದ್ರಿಕಾ ರವೀಶ್, ಕೋಶಾಧಿಕಾರಿ ಮಮತಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರುಪಮಾ ಪ್ರಸಾದ್ ಶೆಟ್ಟಿ ಪ್ರಾರ್ಥಿಸಿ, ಲೆಕ್ಕ ಪರಿಶೋಧಕ ಅಜಿತ್ ಕುಮಾರ್ ಯು.ಬಿ. ಮತ್ತು ಹರೀಶ್ ಕಿಣಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ‌ ಪಿ. ವಿಷ್ಣುದಾಸ್ ಪಾಟೀಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.3 ರಿಂದ 11: ಬೆಳ್ಮಣ್ಣು ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಬೆಳ್ಮಣ್ಣು, ಅ.1: ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್...

ಕ್ವಿಜ್‌: ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಅ.1: ಅಂತರಾಷ್ಟ್ರೀಯ ಹೃದಯ ದಿನಾಚರಣೆಯ ಅಂಗವಾಗಿ ಆದರ್ಶ ಸಮೂಹ ಸಂಸ್ಥೆಗಳು...

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...
error: Content is protected !!