Friday, September 20, 2024
Friday, September 20, 2024

ಹೃದ್ರೋಗ ತಜ್ಞರೊಂದಿಗೆ ನೇರ ಮಾತುಕತೆ ಮತ್ತು ಚರ್ಚೆ

ಹೃದ್ರೋಗ ತಜ್ಞರೊಂದಿಗೆ ನೇರ ಮಾತುಕತೆ ಮತ್ತು ಚರ್ಚೆ

Date:

ಮಣಿಪಾಲ: ವಿಶ್ವ ಹೃದಯ ದಿನ 2021 ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಸೆಪ್ಟೆಂಬರ್ 29 ಬುಧವಾರದಂದು ಸಂಜೆ 5.00 ರಿಂದ 6.00 ಗಂಟೆಯವರೆಗೆ ಕಸ್ತೂರ್ಬಾ ಆಸ್ಪತ್ರೆಯ ಫೇಸ್ ಬುಕ್ ಚಾನೆಲ್ ನಲ್ಲಿ ಹೃದ್ರೋಗ ತಜ್ಞರೊಂದಿಗೆ ನೇರ ಮಾತುಕತೆ ಮತ್ತು ಮುಕ್ತ ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಿದೆ.

ಲಾಕ್ಡೌನ್ ಮತ್ತು ಕೋವಿಡ್ -19 ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಜನರ ಮೇಲೆ ಪರಿಣಾಮ ಬೀರಿತು. ಇದಕ್ಕೆ ಕಾರಣ ಹೆಚ್ಚಾಗಿ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವ ಆರಾಮದಾಯಕ ಜೀವನ ಶೈಲಿ. ಈ ಸಾಂಕ್ರಾಮಿಕ ಸಮಯದಲ್ಲಿ ಜಂಕ್ ಮತ್ತು ಬೀದಿ ಆಹಾರಗಳ ಬಳಕೆ ಕಡಿಮೆಯಾಗಿದ್ದರೂ, ಆರಾಮದಾಯಕ ಕೆಲಸ ಅಥವಾ ಹೆಚ್ಚಾಗಿ ಹೊರಗಡೆ ತಿರುಗಾಡದ ಜೀವನಶೈಲಿಯು ಜನರ ತೂಕವನ್ನು ಹೆಚ್ಚಿಸಲು ಮತ್ತು ಕೆಲವೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. “ಮನೆಯಿಂದ ಕೆಲಸ” ಮತ್ತು “ಆನ್ಲೈನ್ ತರಗತಿಗಳು” ಕೂಡ ಜನರ ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯದ ಮೇಲೆ ಕಡಿಮೆ ಏಕಾಗ್ರತೆಯೊಂದಿಗೆ ಜೀವನಶೈಲಿಗೆ ಕಾರಣವಾಹಿತು.

ಈ ಮುಕ್ತ ಮಾತುಕತೆಯಲ್ಲಿ ಹೃದ್ರೋಗ ವಿಭಾಗದ ಪ್ರಾಧ್ಯಾಪಕರಾದ ಡಾ. ಅಶ್ವಲ್ ಎ ಜೆ, ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಗುರುಪ್ರಸಾದ್ ರೈ, ಮಕ್ಕಳ ಹೃದ್ರೋಗ ತಜ್ಞರಾದ ಡಾ. ಗುಂಜನ್ ಬಂಗ ಮತ್ತು ಪಥ್ಯಾಹಾರ ವಿಭಾಗದ ಮುಖ್ಯಸ್ಥರಾದ ಸುವರ್ಣ ಹೆಬ್ಬಾರ್ ಭಾಗವಹಿಸಲಿದ್ದಾರೆ.

ಈ ಕೆಳಗಿನ ಲಿಂಕ್ ಮತ್ತು ಕ್ಯೂ ಆರ್ ಕೋಡ್ ಬಳಸಿ ಸಾರ್ವಜನಿಕರು ಫೇಸ್ ಬುಕ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರಶ್ನೆಗಳನ್ನು ಕೇಳಬಹುದು ಎಂದು ವೈದ್ಯಕೀಯ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
https://www.facebook.com/ManipalKasturbaHospital

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!