Saturday, September 21, 2024
Saturday, September 21, 2024

ಪೇತ್ರಿ- ಮಹಿಳಾ ಕಿಸಾನ್ ದಿವಸ್ ಕಾರ್ಯಕ್ರಮ

ಪೇತ್ರಿ- ಮಹಿಳಾ ಕಿಸಾನ್ ದಿವಸ್ ಕಾರ್ಯಕ್ರಮ

Date:

ಬ್ರಹ್ಮಾವರ: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ನೆಹರು ಯುವಕೇಂದ್ರ ಉಡುಪಿ ಹಾಗೂ ಸಮೃದ್ದಿ ಮಹಿಳಾ ಮಂಡಳಿ (ರಿ.) ಪೇತ್ರಿ ಚೇರ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ’ಮಹಿಳಾ ಕಿಸಾನ್ ದಿವಸ್’ ಅಂಗವಾಗಿ ಪೇತ್ರಿಯ ಅನ್ನಪೂರ್ಣ ನರ್ಸರಿಯಲ್ಲಿ ಕಾರ್ಯಕ್ರಮ ನಡೆಯಿತು.

ಕುಂದಾಪುರದ ಸಹಾಯಕ ಕೃಷಿ ನಿರ್ದೇಶಕರಾದ ರೂಪ. ಜೆ. ಮಾಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರೈತ ಮಹಿಳೆಯರು ಸ್ವಾವಲಂಬಿಗಳಾಗುವುದು ಮಾತ್ರವಲ್ಲದೆ ಸಂಘಟಿತರಾಗುವುದು ಬಹುಮುಖ್ಯ ಎಂದರು.

ಮುಖ್ಯ ಅತಿಥಿಗಳಾದ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ. ಧನಂಜಯ್ ರವರು ತರಕಾರಿ ಬೀಜಗಳ ಕಿಟ್ ವಿತರಿಸಿ ಯಾವುದೇ ಸಮಸ್ಯೆಗಳಿಗೆ ಅಥವಾ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೃಷಿ ವಿಜ್ಞಾನ ಕೇಂದ್ರ ರೈತರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದರು.

ಸಮೃದ್ದಿ ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರಸನ್ನಾ ಪ್ರಸಾದ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಮೃದ್ಧಿಯು ಯಾವಾಗಲೂ ಸಂಘಟನೆ ಹಾಗೂ ಸಮಾಜಮುಖಿ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ ಹಾಗೂ ಕೃಷಿ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡ ಸದಸ್ಯರು ಬಹಳ ಮಂದಿ ಇದ್ದಾರೆ. ಸಮೃದ್ಧಿಯು ಎಲ್ಲದರಲ್ಲೂ ಸಮೃದ್ಧವೇ ಎಂದರು.

ತರಕಾರಿ ಕೃಷಿಕರಾಗಿರುವ ಅಕ್ಕಯ್ಯ, ಮಲ್ಲಿಗೆ ಕೃಷಿಯನ್ನು ನಡೆಸುತ್ತಿರುವ ರಮ್ಯ ಆರ್ ನಾಯಕ್, ಹೈನುಗಾರಿಕೆಯಲ್ಲಿ ಯಶಸ್ಸು ಕಂಡ ಸವಿತಾರವರನ್ನು ಸನ್ಮಾನಿಸಿ ಗೌರವಿಸಲಾಯಿತು. ರೈತ ಮಹಿಳೆಯರಿಗೆ ಅನ್ನಪೂರ್ಣ ನರ್ಸರಿಯ ಮಾಲಕರಾದ ಶ್ಯಾಮಪ್ರಸಾದ್ ಭಟ್ ರವರು ಅಂಗಾಶ ಕಸಿಯ ಬಾಳೆಯ ಗಿಡಗಳನ್ನು ಉಚಿತವಾಗಿ ವಿತರಿಸಿದರು. ಸಹನಾ ಕೆ. ಹೆಬ್ಬಾರ್, ಇಂದಿರಾ ರವಿ, ಸುಲೋಚನಾ ಉಪಸ್ಥಿತರಿದ್ದರು.

ಆಶಾ ಪಾಟೀಲ್ ಪ್ರಾರ್ಥಿಸಿ, ವನಿತಾ ಪಿ ಶೆಟ್ಟಿ ಸ್ವಾಗತಿಸಿ, ಆಶಾಲತಾ ಧನ್ಯವಾದಗೈದರು. ಮಲ್ಲಿಕಾ ಹರೀಶ್ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!