Friday, September 20, 2024
Friday, September 20, 2024

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಮಂಗಳೂರಿನ ತಂಡ

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಮಂಗಳೂರಿನ ತಂಡ

Date:

ಮಂಗಳೂರು: ಜಗತ್ತಿನ ಅತಿ ಎತ್ತರದ ಯುದ್ಧ ಭೂಮಿ ಎಂದೇ ಖ್ಯಾತಿ ಪಡೆದಿರುವ ಲಡಾಖ್ ಪ್ರಾಂತ್ಯದ ಸಿಯಾಚಿನ್ ಮಿಲಿಟರಿ ಬೇಸ್ ಪ್ರವಾಸಿಗರ ವೀಕ್ಷಣೆಗೆ ಉದ್ಘಾಟನೆಗೊಂಡಿದ್ದು, ಉದ್ಘಾಟನೆ ಸಂದರ್ಭದಲ್ಲಿ ಮಂಗಳೂರಿನ ಮತ್ತು ಕರ್ನಾಟಕದ ಏಕೈಕ ಪ್ರವಾಸಿಗರ ತಂಡವಾಗಿ “ಯೂಥ್ ಆಫ್ ಜಿ.ಎಸ್.ಬಿ” ತಂಡ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.

ಉದ್ಘಾಟನೆ ನೆರವೇರಿಸಿದ ಲಡಾಖ್ ಸಂಸದ ಜಮ್ಯಾಂಗ್ ತ್ಸೆರಿಂಗ್ ಅವರು ಭಾರತದ ಕೊನೆಯ ಹಳ್ಳಿಯಾಗಿರುವ ವಾರ್ಷಿಯಲ್ಲಿ ಮಾತನಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇಂದು ಅಭೂತಪೂರ್ವ ನಿರ್ಧಾರ ತೆಗೆದುಕೊಂಡು ಪ್ರವಾಸೋದ್ಯಮ ಅಭಿವೃದ್ಧಿ, ಲಡಾಖ್ ಪ್ರದೇಶದ ಆರ್ಥಿಕ ಅಭಿವೃದ್ಧಿ ಜೊತೆಗೆ ಜಗತ್ತಿನ ಅತ್ಯಂತ ದುರ್ಗಮ ಯುದ್ಧ ಪ್ರದೇಶವಾಗಿರುವ ಸಿಯಾಚಿನ್ ಮಿಲಿಟರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಂಡು ಭಾರತೀಯ ಸೈನಿಕರಿಗೆ ಮತ್ತಷ್ಟು ಮನೋಸ್ಥೈರ್ಯ ತುಂಬಿಸುವ ಕಾರ್ಯಮಾಡಿದೆ. ಸ್ವಾತಂತ್ರ್ಯದ ಬಳಿಕ ಹಲವು ಸರಕಾರ ಆಡಳಿತ ನಡೆಸಿದ್ದು ಇಂತಹ ನಿರ್ಧಾರ ಯಾರೂ ತೆಗೆದುಕೊಂಡಿಲ್ಲ.

ಉದ್ಘಾಟನೆ ಸಮಯದಲ್ಲಿ ಆಗಮಿಸಿ ಐತಿಹಾಸಿಕ ಕ್ಷಣಕ್ಕೆ ಭಾಗಿಯಾದ ಮಂಗಳೂರಿನ ತಂಡ ಸಮೇತ ನಾನಾ ಭಾಗಗಳಿಂದ ಆಗಮಿಸಿದ ಪ್ರವಾಸಿಗರಿಗೆ ಧನ್ಯವಾದ ಸಮರ್ಪಿಸಿದರು.

ಯೂಥ್ ಆಫ್ ಜಿ.ಎಸ್.ಬಿ ಮುಖ್ಯಸ್ಥರಾಗಿರುವ ಮಂಗಲ್ಪಾಡಿ ನರೇಶ್ ಶೆಣೈ ಹಾಗೂ ತಂಡದ ಇತರ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!