Sunday, October 27, 2024
Sunday, October 27, 2024

ಮಾಹೆ ಮಣಿಪಾಲ: ಉದ್ಯಮಶೀಲತಾ ಶೃಂಗಸಭೆ

ಮಾಹೆ ಮಣಿಪಾಲ: ಉದ್ಯಮಶೀಲತಾ ಶೃಂಗಸಭೆ

Date:

ಮಣಿಪಾಲ, ಫೆ.18: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯ ವಾರ್ಷಿಕ ಪ್ರಮುಖ ಕಾರ್ಯಕ್ರಮವಾದ ಮಣಿಪಾಲ ಉದ್ಯಮಶೀಲತಾ ಶೃಂಗಸಭೆಯ 7 ನೇ ಆವೃತ್ತಿಯನ್ನು ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾಹೆಯು ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಉದ್ಯೋಗದಾತರಾಗಲು ಪೂರಕ ವಾತಾವರಣವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹಕುಲಪತಿಗಳಾದ ಡಾ. ಶರತ್ ರಾವ್, ಉದ್ಯಮಶೀಲತೆಯು ಒಂಟಿ ಪಯಣವಾಗಿರದೆ, ಬೆಂಬಲ, ಸಹಯೋಗ ಹಾಗೂ ಪಾಲುದಾರಿಕೆಯ ಮೂಲಕ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ದಿಕ್ಸೂಚಿ ಭಾಷಣ ಮಾಡಿದ ಬೋಟ್ ಸಂಸ್ಥೆಯ ಸಹ-ಸಂಸ್ಥಾಪಕ ಅಮನ್ ಗುಪ್ತಾ, ಉದ್ಯಮದಲ್ಲಿ ಯಶಸ್ಸನ್ನು ಸಾಧಿಸಲು ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು.

ಈ ಶೃಂಗಸಭೆಯನ್ನು ಮಣಿಪಾಲ್ ಇನ್‌ಕ್ಯುಬೇಟರ್‌ಗಳು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ), ಮಾಹೆಯ ವಿವಿಧ ಆವಿಷ್ಕಾರ ಮತ್ತು ಉದ್ಯಮಶೀಲತೆಯ ಪೋಷಕ ಘಟಕಗಳು ಜಂಟಿಯಾಗಿ ಆಯೋಜಿಸಿದ್ದು, ಎಂಐಟಿ ವಾಣಿಜ್ಯೋದ್ಯಮ ಸೆಲ್ (ಇ-ಸೆಲ್) ಕಾರ್ಯಗತಗೊಳಿಸಿದೆ. ಸಮಾರಂಭದ ಅಂಗವಾಗಿ ಅತ್ಯುತ್ತಮ ಸಾಧನೆಗಾಗಿ ಬ್ಲ್ಯಾಕ್ ಫ್ರಾಗ್ ಟೆಕ್ನಾಲಜೀಸ್, ಈಕೋನ ಎಕ್ಸ್, ಬಗ್ ಬೇಸ್ ಸ್ಟಾರ್ಟಪ್ ಗಳನ್ನು ಸಮ್ಮಾನಿಸಲಾಯಿತು. ಎಂಐಟಿ ಮಣಿಪಾಲದ ನಿರ್ದೇಶಕರಾದ ಕಮಾಂಡರ್ (ಡಾ.) ಅನಿಲ್ ರಾಣಾ, ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ ಭಟ್, ಶೃಂಗಸಭೆಯ ಸಂಚಾಲಕ ಹಾಗೂ ಎಂಯುಟಿಬಿಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಂತೋಷ ರಾವ್, ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!