Tuesday, February 25, 2025
Tuesday, February 25, 2025

ಮಾಹೆ ಮಣಿಪಾಲ: ಉದ್ಯಮಶೀಲತಾ ಶೃಂಗಸಭೆ

ಮಾಹೆ ಮಣಿಪಾಲ: ಉದ್ಯಮಶೀಲತಾ ಶೃಂಗಸಭೆ

Date:

ಮಣಿಪಾಲ, ಫೆ.18: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯ ವಾರ್ಷಿಕ ಪ್ರಮುಖ ಕಾರ್ಯಕ್ರಮವಾದ ಮಣಿಪಾಲ ಉದ್ಯಮಶೀಲತಾ ಶೃಂಗಸಭೆಯ 7 ನೇ ಆವೃತ್ತಿಯನ್ನು ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾಹೆಯು ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಬೆಳೆಸುವುದರೊಂದಿಗೆ ಉದ್ಯೋಗದಾತರಾಗಲು ಪೂರಕ ವಾತಾವರಣವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಹೆಯ ಆರೋಗ್ಯ ವಿಜ್ಞಾನ ವಿಭಾಗದ ಸಹಕುಲಪತಿಗಳಾದ ಡಾ. ಶರತ್ ರಾವ್, ಉದ್ಯಮಶೀಲತೆಯು ಒಂಟಿ ಪಯಣವಾಗಿರದೆ, ಬೆಂಬಲ, ಸಹಯೋಗ ಹಾಗೂ ಪಾಲುದಾರಿಕೆಯ ಮೂಲಕ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ದಿಕ್ಸೂಚಿ ಭಾಷಣ ಮಾಡಿದ ಬೋಟ್ ಸಂಸ್ಥೆಯ ಸಹ-ಸಂಸ್ಥಾಪಕ ಅಮನ್ ಗುಪ್ತಾ, ಉದ್ಯಮದಲ್ಲಿ ಯಶಸ್ಸನ್ನು ಸಾಧಿಸಲು ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು.

ಈ ಶೃಂಗಸಭೆಯನ್ನು ಮಣಿಪಾಲ್ ಇನ್‌ಕ್ಯುಬೇಟರ್‌ಗಳು, ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ), ಮಾಹೆಯ ವಿವಿಧ ಆವಿಷ್ಕಾರ ಮತ್ತು ಉದ್ಯಮಶೀಲತೆಯ ಪೋಷಕ ಘಟಕಗಳು ಜಂಟಿಯಾಗಿ ಆಯೋಜಿಸಿದ್ದು, ಎಂಐಟಿ ವಾಣಿಜ್ಯೋದ್ಯಮ ಸೆಲ್ (ಇ-ಸೆಲ್) ಕಾರ್ಯಗತಗೊಳಿಸಿದೆ. ಸಮಾರಂಭದ ಅಂಗವಾಗಿ ಅತ್ಯುತ್ತಮ ಸಾಧನೆಗಾಗಿ ಬ್ಲ್ಯಾಕ್ ಫ್ರಾಗ್ ಟೆಕ್ನಾಲಜೀಸ್, ಈಕೋನ ಎಕ್ಸ್, ಬಗ್ ಬೇಸ್ ಸ್ಟಾರ್ಟಪ್ ಗಳನ್ನು ಸಮ್ಮಾನಿಸಲಾಯಿತು. ಎಂಐಟಿ ಮಣಿಪಾಲದ ನಿರ್ದೇಶಕರಾದ ಕಮಾಂಡರ್ (ಡಾ.) ಅನಿಲ್ ರಾಣಾ, ಜಂಟಿ ನಿರ್ದೇಶಕರಾದ ಡಾ. ಸೋಮಶೇಖರ ಭಟ್, ಶೃಂಗಸಭೆಯ ಸಂಚಾಲಕ ಹಾಗೂ ಎಂಯುಟಿಬಿಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಂತೋಷ ರಾವ್, ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!