Monday, February 24, 2025
Monday, February 24, 2025

ಕಸ್ತೂರ್ಬಾ ಆಸ್ಪತ್ರೆಗೆ ಉಪಕರಣಗಳ ಕೊಡುಗೆ

ಕಸ್ತೂರ್ಬಾ ಆಸ್ಪತ್ರೆಗೆ ಉಪಕರಣಗಳ ಕೊಡುಗೆ

Date:

ಮಣಿಪಾಲ: ಸಹಾಯ ಹಸ್ತ ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್,  ದಿ ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ 317 ಸಿ ಮತ್ತು ಸಿಎಸ್ಆರ್ ಪ್ರಾಜೆಕ್ಟ್ ಆಫ್ ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಸ್ತಾಂತರಿಸಿದ ಉಪಕರಣಗಳು ಜೈವಿಕ ಸುರಕ್ಷತೆ ಕ್ಯಾಬಿನೆಟ್ ವರ್ಗ II, ಟೈಪ್ ಎ 2 ಆಗಿದ್ದು, ದಾದಿಯರು, ವೈದ್ಯರು ಮತ್ತು ರೋಗಿಗಳಿಗೆ ಸುರಕ್ಷತೆಯನ್ನು ಖಾತ್ರಿಪಡಿಸುವ ಕಟ್ಟುನಿಟ್ಟಾದ ಅಸೆಪ್ಟಿಕ್ ಮುನ್ನೆಚ್ಚರಿಕೆಗಳ ಅಡಿಯಲ್ಲಿ ಕೀಮೋಥೆರಪಿಯನ್ನು ತಯಾರಿಸಲು ಇದು ಅಗತ್ಯವಾಗಿರುತ್ತದೆ.
 
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ 317 ಸಿ ಇದರ ಜಿಲ್ಲಾ ರಾಜ್ಯಪಾಲರಾದ ಪಿ.ಎಂ.ಜೆ.ಎಫ್ ಎಚ್ ವಿಶ್ವನಾಥ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಕ್ಯಾನ್ಸರ್ ಚಿಕಿತ್ಸೆ ಸೇರಿದಂತೆ ಎಲ್ಲಾ ಚಿಕಿತ್ಸೆಗಳನ್ನು ಆಧುನಿಕ ಸೌಲಭ್ಯದೊಂದಿಗೆ ಅತಿ ಕಡಿಮೆ ದರದಲ್ಲಿ ನೀಡುತ್ತಿರುವುದಕ್ಕೆ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಅಭಿನಂದಿಸಿದರು. ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯಿಂದ ಇನ್ನಷ್ಟು ಅನುದಾನ ತರಲಾಗುವುದು ಮತ್ತು ಅನುದಾನ ನೀಡುವ ನಮ್ಮ ಮೊದಲ ಆಯ್ಕೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಆಗಿರುತ್ತದೆ ಎಂದರು. 

ಜಿಲ್ಲಾ 2 ನೇ ಉಪ ರಾಜ್ಯಪಾಲ ಎಂ.ಜೆ.ಎಫ್ ಡಾ.ನೇರಿ ಕರ್ನೆಲಿಯೊ, ಸಹಾಯ ಹಸ್ತ ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್ ಮುಖ್ಯಸ್ಥರಾದ ಪಿ.ಎಂ.ಜೆ.ಎಫ್ ಡಾ. ಎಚ್ ಗಣೇಶ್ ಪೈ, ಕೆ ಎಂ ಸಿ ಡೀನ್ ಡಾ. ಶರತ್ ಕೆ ರಾವ್, ಫೆಡರಲ್ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಶೈನ್, ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಲಯನ್ಸ್ ಕ್ಲಬ್ ಮಣಿಪಾಲ್ ಅಧ್ಯಕ್ಷ ಎಂ.ಜೆ.ಎಫ್ ಸತೀಶ್ಚಂದ್ರ, ಎಂಸಿಸಿಸಿಸಿ ಇದರ ಸಂಯೋಜಕರಾದ ಡಾ. ನವೀನ್ ಎಸ್ ಸಲೀನ್ಸ್, ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದ ಡಾ.ವಾಸುದೇವ ಭಟ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!