Sunday, February 23, 2025
Sunday, February 23, 2025

ಬ್ರಹ್ಮಾವರ: ವಿಶ್ವ ಮಾನಸಿಕ ಆರೋಗ್ಯ ದಿನ

ಬ್ರಹ್ಮಾವರ: ವಿಶ್ವ ಮಾನಸಿಕ ಆರೋಗ್ಯ ದಿನ

Date:

ಬ್ರಹ್ಮಾವರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಕಮಲಾ.ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ, ಭಾರತೀಯ ಮನೋವೈದ್ಯಕೀಯ ಸಂಘ ದಕ್ಷಿಣ ಪ್ರಾಂತ್ಯ ಘಟಕ, ಸಮುದಾಯ ಮಾನಸಿಕ ಅರಿವು ಮೂಡಿಸುವ ಗುಂಪು ಉಡುಪಿ, ಮನೋ ವೈದ್ಯಕೀಯ ಸಂಘ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಇಂದು ಸಮುದಾಯ ಪ್ರಾರ್ಥನ ಕೇಂದ್ರ ಅಣ್ಣಪ್ಪ ನಗರ ಹಾರಾಡಿಯಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮನ್ನು ಕಾನೂನು‌ ಸೇವೆಗಳ ಪ್ರಾಧಿಕಾರ ಉಡುಪಿ ಇದರ ಸದಸ್ಯ ಕಾರ್ಯದರ್ಶಿಗಳಾದ ಶರ್ಮಿಳಾ ಎಸ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾನಸಿಕ ರೋಗಿಗಳನ್ನು ಮಾನವೀಯತೆಯ ನಿಲುವಿನಲ್ಲಿ ಸಮಾಜ ನೋಡಬೇಕು. ಮಾನಸಿಕ ರೋಗಿಗಳನ್ನು ತಾರತಮ್ಯ, ಭೇಧಭಾವದಿಂದ ನೋಡುವುದು, ಕಾನೂನಿನ ಅಡಿಯಲ್ಲಿ ಅಪರಾಧ. ಎಲ್ಲಾ ಸ್ಥರದ ಮಾನಸಿಕ‌ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುವಂತೆ‌ ಅಗಬೇಕು ಎಂದು ಹೇಳಿದರು.

ಮನೋರೋಗಕ್ಕೆ ಚಿಕಿತ್ಸೆಗಳು ಹಾಗೂ ಮಾನಸಿಕ ‌ಆರೋಗ್ಯದ ಬಗ್ಗೆ ಸಮುದಾಯ ಜಾಗೃತಿ ಕಾರ್ಯಕ್ರಮಗಳು ಮಾನಸಿಕ ಆರೋಗ್ಯ ಸಮತೋಲನಕ್ಕೆ‌ ಅವಶ್ಯಕ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಯ ನಿರ್ದೇಶಕರು, ಮನೋವೈದ್ಯರಾದ ಡಾ.ಪಿ.ವಿ.ಭಂಡಾರಿ ಹೇಳಿದರು.

ಒನ್ ಗುಡ್ ಸ್ಟಪ್ ಸಂಸ್ಥೆಯ ಸಂಸ್ಥಾಪಕರು ಅಡಳಿತ ವಿಶ್ವಸ್ಥರಾದ ಅಮಿತಾ ಪೈ ರವರು ಸಂಘ ಸಂಸ್ಥೆಗಳು ಸಮುದಾಯದಲ್ಲಿ ಮಾನಸಿಕ‌ ಆರೋಗ್ಯ ಕುರಿತು ಅರಿವು ಮೂಡಿಸಬೇಕು ಎಂದು‌ರು.

ರೋಟರಿ ಸಂಸ್ಥೆ ಬ್ರಹ್ಮಾವರದ ಮಾಜಿ‌ ಅಧ್ಯಕ್ಷರಾದ ವಾಲ್ಟರ್ ಸಿರಿಲ್ ಪಿಂಟೋ,‌ ರೋಟರಿ ಶಂಕರಪುರದ ನಿಕಟಪೂರ್ವ ಅಧ್ಯಕ್ಷರಾದ ಎಡ್ವರ್ಡ್ ಮೆಂಡೊನ್ಸಾ ಇವರು ಮುಖ್ಯ‌ ಅತಿಥಿಗಳಾಗಿ ಭಾಗವಹಿಸಿದರು. ಸಂಸ್ಥೆಯ ಮನೋವೈದ್ಯರಾದ ಡಾ.ಮಾನಸ್ ಉಪಸ್ಥಿತರಿದ್ದರು.

ಸಂಸ್ಥೆಯ ಮನಶಾಸ್ತ್ರಜ್ಞರಾದ ನಾಗರಾಜಮೂರ್ತಿ ಇವರು ಸ್ವಾಗತಿಸಿ, ಸಹನಾ ಪ್ರಾರ್ಥಿಸಿ, ಅಪ್ತ ಸಮಲೋಚಕರಾದ ಪದ್ಮ ರಾಘವೇಂದ್ರ ವಂದಿಸಿದರು. ಅಪ್ತ ಸಮಲೋಚಕಾರದ ದೀಪಾ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!