Friday, September 20, 2024
Friday, September 20, 2024

ಕಾರ್ಯಕರ್ತರ ಮೇಲಿನ ಸುಳ್ಳು ಪ್ರಕರಣ ವಾಪಾಸು ಪಡೆಯಿರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕಾರ್ಯಕರ್ತರ ಮೇಲಿನ ಸುಳ್ಳು ಪ್ರಕರಣ ವಾಪಾಸು ಪಡೆಯಿರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Date:

ಬೆಂಗಳೂರು: ಬೆಂಗಳೂರಿನ ವಿಕಾಸ ಸೌಧದಲ್ಲಿ ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರರವರನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾಗಿ, ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಹಸ್ತಾಂತರಿಸಿದರು.

ರಾಜ್ಯದಲ್ಲಿ ಈ ಹಿಂದೆ ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸು ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿರುವ ಇಂತಹ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಗೃಹ ಸಚಿವರಲ್ಲಿ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ವಿಷಯಗಳನ್ನು ಕೂಡಲೇ ಗಮನಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!