Sunday, February 8, 2026
Sunday, February 8, 2026

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

ಇಂದ್ರಾಳಿ ರೈಲು ನಿಲ್ದಾಣ- ಅಪ್ರಾಪ್ತ ಬಾಲಕಿಯ ರಕ್ಷಣೆ

Date:

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿ ಅಸಹಾಯಕ ಸ್ಥಿತಿಯಲ್ಲಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಕ್ಕಳ ಸಹಾಯವಾಣಿಯಿಂದ ದೂರು ಬಂದಿತ್ತು.

ಸಾಮಾಜಿಕ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಪ್ರಮೋದ್, ನಯನ, ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಿದರು.

ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದೆ, ಅಲ್ಲಿ ಕೆಲಸ ತುಂಬ ಕಠಿಣವಾಗಿರುವುದರಿಂದ, ಕಾರ್ಖಾನೆಯ ಮಾಲೀಕರಿಗೆ ಹೇಳದೆ, ನಾನು ಸ್ವಂತ ಊರಾದ ಮಧ್ಯಪ್ರದೇಶಕ್ಕೆ ಹೋಗಲು ನಿರ್ಧರಿಸಿ ಇಂದ್ರಾಳಿ ರೈಲು ನಿಲ್ದಾಣಕ್ಕೆ ಬಂದಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಳು.

ನಂತರ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಮೌಖಿಕ ಆದೇಶದಂತೆ ಬಾಲಕಿಯರ ಬಾಲಮಂದಿರ ನಿಟ್ಟೂರು ಇಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!