Friday, September 20, 2024
Friday, September 20, 2024

ಪ್ರತಿಷ್ಠಿತ ಜಿಪಿಎಲ್ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧೋನಿ

ಪ್ರತಿಷ್ಠಿತ ಜಿಪಿಎಲ್ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧೋನಿ

Date:

ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ – 2023 ಇದರ ಆಮಂತ್ರಣ ಪತ್ರಿಕೆಯನ್ನು ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಂಗಳೂರಿನಲ್ಲಿ ಶನಿವಾರ ಬಿಡುಗಡೆಗೊಳಿಸಿದರು.

ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಅವರು ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿಯವರನ್ನು ಆಮಂತ್ರಿಸಿದರು.

ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿ ಪಡೆದುಕೊಂಡ ಎಂ ಎಸ್ ಧೋನಿ ಭಾಗವಹಿಸುವ ಭರವಸೆಯನ್ನು ನೀಡಿದರು. ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.

7 ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸಲಾಗುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿ.ಎಸ್.ಬಿ ಅಡಿಶನ್, ವೆರೈಟಿ ಎಂಟರ್ ಟೇನ್ ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!